Connect with us

DAKSHINA KANNADA

ಕಡಬ – ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ.


ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.  ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.


ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಕಡಬ ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೀಗ ಸ್ಥಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸುತ್ತಿದ್ದು, ಪ್ರತಿಭಟನೆ ಜೋರಾಗುವ ಸಾಧ್ಯತೆ ಇದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *