DAKSHINA KANNADA
ಕಡಬ- ಅಸ್ಥಿಪಂಜರ ಪತ್ತೆಯಾದ ಬೆನ್ನಲ್ಲೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ ಪತ್ನಿ
ಪುತ್ತೂರು ಅಕ್ಟೋಬರ್ 11: ಕಡಬದ ಕುಂತೂರು ಗ್ರಾಮದ ಎರ್ಮಾಳ ಎಂಬಲ್ಲಿ ಪುರುಷ ದೇಹ ತಲೆ ಬುರಡೆ ಮತ್ತು ಅಸ್ಥಿ ಪಂಜರ ಪತ್ತೆಯಾದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಮಹಿಳೆಯೊಬ್ಬರು ತನ್ನ ಗಂಡ ಕಳೆದ 2 ತಿಂಗಳಿನಿಂದ ನಾಪತ್ತೆಯಾಗಿದ್ದಾರೆ ಎಂದು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಎರ್ಮಾಳ ಎಂಬಲ್ಲಿನ ಸತೀಶ್(50) ಎಂಬುವರು ಕಳೆದ ಆಗಸ್ಟ್ 2 ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ಗೀತಾ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈಗ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮನೆಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿ ಅನ್ನಡ್ಕ ಎಂಬಲ್ಲಿ ಸಣ್ಣ ಹಳ್ಳವೊಂದರಲ್ಲಿ ಮಾನವನ ತಲೆ ಬುರುಡೆಯೊಂದು ಮಳೆ ನೀರಿಗೆ ಕೊಚ್ಚಿಕೊಂಡು ಬಂದಿತ್ತು.ತಲೆಬುರುಡೆ ನೀರಿನಲ್ಲಿ ಕೊಚ್ಚಿಕೊಂಡು ಬಂದ ಹಿನ್ನೆಲೆಯಲ್ಲಿ ನಿನ್ನೆ ಹುಡುಕಾಟ ನಡೆಸಿದ ಸ್ಥಳೀಯರಿಗೆ ಕೆಲ ಮಾನವ ಅಸ್ತಿ ಪಂಜರಗಳೂ ಕಾಣಸಿಕ್ಕಿವೆ. ಅಸ್ತಿ ಪಂಜರ ಸಿಕ್ಕ ವಿಚಾರ ಪ್ರಚಾರವಾಗುತ್ತಿದ್ದಂತೆ ಎರಡು ತಿಂಗಳ ಹಿಂದೆ ನಾಪತ್ತೆಯಾದ ಸತೀಶ್ ಬಗ್ಗೆ ದೂರು ನೀಡದ ಸತೀಶ್ ಪತ್ನಿ, ನಿನ್ನೆ ಕಡಬ ಠಾಣೆಗೆ ದೂರು ನೀಡಿದ್ದಾರೆ.
You must be logged in to post a comment Login