Connect with us

    DAKSHINA KANNADA

    ಕಡಬ ಪೊಲೀಸರ ಕಾರ್ಯಾಚರಣೆ, 30ಕ್ಕೂ ಅಧಿಕ ಪ್ರಕರಣಗಳ ನಟೋರಿಯಸ್ ಕಳ್ಳರ ಬಂಧನ..!

    ಕಡಬ : ದಕ್ಷಿಣ ಕನ್ನಡ ಜಿಲ್ಲೆ ಕಡಬ ಪೊಲೀಸರು ಯಶಸ್ವಿ ಕಾರ್ಯಾಚರಣೆಯೊಂದರಲ್ಲಿ 30 ಕ್ಕೂ ಅಧಿಕ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ.

    ಎರಡು ವಾರದ ಹಿಂದೆ ಕಡಬ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಜಾಡು ಹಿಡಿದು ಹೋದಾಗ ಈ ಇಬ್ಬರು ಕಳ್ಳರು ಸಿಕ್ಕಿ ಬಿದ್ದಿದ್ದು ಇನ್ನೂ ಮೂವರ ಬಂಧನಕ್ಕೆ ಆಗಬೇಕಿದೆ. ಬಂಟ್ವಾಳದ ಸಾದತ್‌ ಆಲಿ ಫರಂಗಿಪೇಟೆ (30) ಹಾಗೂ ಹಮೀದ್‌ ವಳಚ್ಚಿಲ್‌(31) ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣದಲ್ಲಿ ಬಂಧಿತ ಇನ್ನೋರ್ವ ಆರೋಪಿ ಸಾದತ್‌ ಆಲಿ ವಿರುದ್ಧ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ವಿವಿಧ ಠಾಣೆಯಲ್ಲಿ ದಾಖಲಾಗಿವೆ.

    ಆರೋಪಿಗಳು ಮಾ. 11ರಂದು ರಾಮಕುಂಜ ಗ್ರಾಮದ ನೆಬಿಸಾ ಅವರ ಮನೆಯ ಹಿಂಬಾಗಿಲಿನ ಕಬ್ಬಿಣದ ಶಟರ್‌ ಮುರಿದು, ಬೀಗ ತೆಗೆದು ಕೊಠಡಿಯಲ್ಲಿದ್ದ 8 ಕಪಾಟುಗಳಲ್ಲಿ ನಗದು ಹಾಗೂ ಚಿನ್ನಕ್ಕೆ ಜಾಲಾಡಿದ್ದರು. ಈ ಬಗ್ಗೆ ನೆಬಿಸಾ ಅವರ ಪುತ್ರ ಸಿದ್ದಿಕ್‌ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೆಬಿಸಾ ಅವರು ಮಗಳು ನಸೀಮಾ, ಅಳಿಯ ನಾಸೀರ್‌ ಹಾಗೂ ಮಕ್ಕಳೊಂದಿಗೆ ಮಾ.7ರಂದು ಮನೆಗೆ ಬೀಗ ಹಾಕಿ ನಸೀಮಾ ಅವರ ಹೆರಿಗೆಗಾಗಿ ಮಂಗಳೂರಿನ ಕಣಚೂರು ಆಸ್ಪತ್ರೆಗೆ ತೆರಳಿದ್ದರು. ಮಾ. 11ರಂದು ಮಧ್ಯಾಹ್ನ 3.30ರ ವೇಳೆಗೆ ನೆಬಿಸಾ ಸಂಬಂಧಿ ಕರಾಗಿದ್ದ ಫಾಯಿಸಾ ಅವರು ಈ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು.
    ನೆಬಿಸಾ ಅವರ ಎದುರಿನ ಮನೆಯ ವರ ಸಿಸಿಟಿವಿಯಲ್ಲಿ ಮಾ. 11ರ ಮುಂಜಾನೆ 2.30ರ ವೇಳೆಗೆ ಕಾರಿನಲ್ಲಿ ಬಂದವರು ನೆಬಿಸಾ ಅವರ ಮನೆಗೆ ಹೋಗಿ ಅಲ್ಲಿಂದ ಸುಮಾರು ಹೊತ್ತಿನ ಬಳಿಕ ಬಂದು ಮತ್ತೆ ಕಾರಿನಲ್ಲಿ ತೆರಳಿರುವ ದೃಶ್ಯ ಸೆರೆಯಾಗಿತ್ತು. ಉಪ್ಪಿನಂಗಡಿ ಸರ್ಕಲ್‌ ಇನ್‌ಸ್ಪೆಕ್ಟರ್‌ ರವಿ ಬಿ.ಎಸ್‌., ಕಡಬ ಠಾಣಾ ಕ್ರೈಂ ಪಿಎಸ್‌ಐ ಅಕ್ಷಯ್‌ ಢವಗಿ ಹಾಗೂ ಸಿಬಂದಿ ಆರೋಪಿಗಳನ್ನು ಮಾ. 25ರಂದು ನೆಬಿಸಾ ಅವರ ಮನೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. .

    Share Information
    Advertisement
    Click to comment

    You must be logged in to post a comment Login

    Leave a Reply