DAKSHINA KANNADA
ಕಡಬ – ಕಳ್ಳ ಕದ್ದ ಜೀಪನ್ನು ವಶಕ್ಕೆ ಪಡೆಯಲು ಹೋದ ಪೊಲೀಸರನ್ನು ತಡೆದ ಮನೆಯವರು…!!
ಕಡಬ ಜುಲೈ 17: ಆಟೋ ಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕ ನ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದುವರೆ ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಈತನ ಮೊಬೈಲ್ ಸಿಡಿಆರ್ ಆಧಾರದಲ್ಲಿ ಕಳ್ಳತನ ಪ್ರಕರಣ ಪತ್ತೆ ಹಚ್ಚಲಾಗಿದೆ
ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕ ವರ್ಗೀಸ್ ಎಂಬವರ ಮನೆಗೆ 2021 ರ ಡಿಸೆಂಬರ್ 13ರಂದು ಬೆಳಿಗ್ಗೆ 8:45 ಗಂಟೆಗೆ ಕಳ್ಳರು ನುಗ್ಗಿ ಕಳ್ಳತನ ಮಾಡಿದ್ದರು. ಸುಮಾರು 24ಗ್ರಾಂ ತೂಕದ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಸರ, 6ಗ್ರಾಂ ತೂಕದ ಚಿನ್ನದ ಬೆಂಡೋಲೆ, ಮಕ್ಕಳ ಬೆಂಡೋಲೆಗಳು ಸೇರಿದಂತೆ ಅಂದಾಜು ರೂಪಾಯಿ 1.50 ಲಕ್ಷ ಮೌಲ್ಯದ ಸುಮಾರು 41ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿತ್ತು.
ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಸ್ತುತ ಕಳವಾದ 41 ಗ್ರಾಂ ಚಿನ್ನದಲ್ಲಿ 17 ಗ್ರಾಂ ಚಿನ್ನವನ್ನು ಪೊಲೀಸರು ಆರೋಪಿಗಳಿಂದ ವಶಪಡಿಸಿ ಮನೆಯವರಿಗೆ ಹಸ್ತಾಂತರ ಮಾಡಿದ್ದಾರೆ. ಉಳಿದ ಚಿನ್ನಾಭರಣ ಪತ್ತೆಯಾಗಬೇಕಿದೆ. ಆರೋಪಿ ಸದ್ದಾಂ ನೀಡಿದ ಹೇಳಿಕೆಯಂತೆ ಪೊಲೀಸರು ಆತ ಕಳವು ಮಾಡಿದ ಜೀಪನ್ನು ವಶಕ್ಕೆ ಪಡೆಯಲು ಮನೆಗೆ ಹೋದಾಗ ಮಹಿಳೆಯರು ಮಕ್ಕಳೊಂದಿಗೆ ಪೊಲೀಸರನ್ನು ಅಡ್ಡಗಟ್ಟಿದ್ದು, ಜೀಪನ್ನು ಬಿಟ್ಚುಕೊಡದ ಘಟನೆಯೂ ನಡೆಯಿತು.
You must be logged in to post a comment Login