DAKSHINA KANNADA
ಕಡಬ: ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ.
ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿ ಇಳಿದಿದ್ದರು, ಈ ಸಂದರ್ಭದಲ್ಲಿ ಆಯತಪ್ಪಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಕುಮಾರಧಾರಾ ನದಿಯಲ್ಲಿ ಸಿಲುಕಿದ ರವಿಕುಮಾರ್ ರನ್ನು ಅಗ್ನಿಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡದಿಂದ ರಕ್ಷಣೆ ಮಾಡಲಾಗಿದೆ. ಇದೀಗ ರವಿಕುಮಾರ್ ಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
You must be logged in to post a comment Login