Connect with us

DAKSHINA KANNADA

ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ತಾಲೂಕು ಬಂದ್

ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ತಾಲೂಕು ಬಂದ್

ಮಂಗಳೂರು ಅಕ್ಟೋಬರ್ 26: ವಾಟ್ಸಾಪ್ ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಅವಹೇಳನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತ ವ್ಯಕ್ತಿಯನ್ನು ಪೋಲಿಸರಿಗೆ ಒಪ್ಪಿಸಿದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೋಲೀಸರು ಪ್ರಕರಣದಲ್ಲಿ ಸಿಲುಕಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 28 ಶನಿವಾರದಂದು ಕಡಬ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

ಕಡಬದಲ್ಲಿ ಗುರುವಾರ ಸಂಜೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ತುರ್ತು ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ವಾಟ್ಸಾಪ್ ಪ್ರಕರಣದಲ್ಲಿ ಆರೋಪಿತ ಯುವಕನನ್ನು ಸಂಘಟನೆಯ ಪ್ರಮುಖರೇ ಪೋಲೀಸರಿಗೆ ಒಪ್ಪಿಸಿ ಪ್ರಕರಣವನ್ನು ಸೌಹಾರ್ದಯುತವಾಗಿ ಮುಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಆದರೆ ಪ್ರಕರಣದಲ್ಲಿ ಅಮಾಯಕ ಹಿಂದೂ ಯುವಕನನ್ನು ಸಿಲುಕಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಲೀಸರಿಗೆ ನಾವು ಇಷ್ಟೊಂದು ಸಹಕಾರ ನೀಡುತ್ತಿರುವಾಗ ಪ್ರಕರಣಕ್ಕೆ ಸಂಬಂಧಪಡದ ಯುವಕನೊಬ್ಬನನ್ನು ಪ್ರಕರಣದಲ್ಲಿ ಹೆಚ್ಚುವರಿಯಾಗಿ ಸೇರ್ಪಡೆ ಮಾಡಿ ಪೋಲೀಸರು ಹಿಂದೂಗಳ ಮೇಲೆ ಸವಾರಿ ಮಾಡುತ್ತಿದ್ದಾರೆ. ಮಾತ್ರವಲ್ಲ ಈ ಪ್ರಕರಣದಲ್ಲಿ ಅನಗತ್ಯವಾಗಿ ನಾಲ್ವರನ್ನು ಎರಡು ದಿನ ಠಾಣೆಯಲ್ಲಿ ಕೂಡಿ ಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದರು. ಈ ಹಿನ್ನಲೆಯಲ್ಲಿ ಶನಿವಾರದಂದು ಕಡಬ ಹಾಗೂ ಸುಬ್ರಹ್ಮಣ್ಯದಲ್ಲೂ ಏಕ ಕಾಲದಲ್ಲಿ ಬಂದ್ ಹಾಗೂ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *