Connect with us

    DAKSHINA KANNADA

    ಕಡಬ: ಶಾಮಿಯಾನ ಹಾಕುತ್ತಿದ್ದ ಹುಡುಗ ಫ್ಯಾನಿನ ಉಕ್ಕಿಗೆ ಕೊರಳೊಡ್ಡಿದ..!

    ಕಡಬ:  ಶಾಮಿಯಾನ ಹಾಕುತ್ತಿದ್ದ ಹುಡುಗ ಫ್ಯಾನಿನ ಉಕ್ಕಿಗೆ ಕೊರಳೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕಳಾರದಲ್ಲಿ ನಡೆದಿದೆ.

    ಇಲ್ಲಿನ ಓರೋಡಿ ಮನೆಯ ಸೂಫಿ ಬ್ಯಾರಿ ಪುತ್ರ ಮಹಮ್ಮದ್ ಶರೀಫ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.  ಹಳೆಯ ಮನೆಯೊಂದರಲ್ಲಿ ನೇಣುಬಿಗಿದುಕೊಂಡು ಶರೀಫ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕನ ಅಣ್ಣ ಅಬ್ದುಲ್ ಅಜೀಜ್ ಎಂಬವರು ಕಡಬ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತಮ್ಮನು ಶಾಮಿಯಾನ ಕೆಲಸವನ್ನು ಮಾಡಿಕೊಂಡಿದ್ದು ಹಲವರಿಂದ ಕೈಸಾಲ ಪಡೆದುಕೊಂಡಿದ್ದ. ಹೀಗಾಗಿ ಸಾಲ ತೀರಿಸಲಾಗದೆ ಮಾನಸಿಕವಾಗಿ ನೊಂದು ಜುಲೈ 29 ರ ಮುಂಜಾನೆ ಮನೆಯಿಂದ ಹೋಗಿದ್ದ. ಸುಮಾರು 10.45 ಗಂಟೆಗೆ ಕಳಾರದ ಗುಜಿರಿ ಲತೀಪ್ ರವರ ಹಳೆಯ ಮನೆಯಲ್ಲಿ ಫ್ಯಾನಿನ ಉಕ್ಕಿಗೆ ಹಳೆಯ ಲುಂಗಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಹೋದ ವೇಳೆ ತನ್ನ ತಮ್ಮ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ತಮ್ಮ ವಿಪರೀತವಾಗಿ ಕೈ ಸಾಲ ಮಾಡಿಕೊಂಡು ಸಾಲವನ್ನು ತೀರಿಸಲಾಗದೆ ಹಣಕಾಸಿನ ವ್ಯವಹಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಾವಿನಲ್ಲಿ ಬೇರೆ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply