Connect with us

    DAKSHINA KANNADA

    ಕಡಬ :ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಪೊಲೀಸ್ ವಶ..! 

    ಕಡಬ : ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು ಎನ್ನಲಾಗಿದೆ.

    ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದರು ಎನ್ನಲಾಗಿದೆ.ಈ ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪೊಲೀಸರು ರೂ 20,000/- ಮೌಲ್ಯದ ಜಾನುವಾರುಗಳನ್ನು ಹಾಗೂ ಅಂದಾಜು ರೂ 2,00,000/ ಮೌಲ್ಯದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ : 69/2023 ಕಲಂ: 379 ಐಪಿಸಿ ಮತ್ತು ಕಲಂ: 5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ಯಂತೆ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply