DAKSHINA KANNADA
ಕಡಬ :ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ಪೊಲೀಸ್ ವಶ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಡಬ : ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು ಎನ್ನಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದರು ಎನ್ನಲಾಗಿದೆ.ಈ ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರು ರೂ 20,000/- ಮೌಲ್ಯದ ಜಾನುವಾರುಗಳನ್ನು ಹಾಗೂ ಅಂದಾಜು ರೂ 2,00,000/ ಮೌಲ್ಯದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ : 69/2023 ಕಲಂ: 379 ಐಪಿಸಿ ಮತ್ತು ಕಲಂ: 5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ಯಂತೆ ಪ್ರಕರಣ ದಾಖಲಾಗಿದೆ.
You must be logged in to post a comment Login