Connect with us

DAKSHINA KANNADA

ಕಡಬ: ಬೆಳ್ಳಂಬೆಳಿಗ್ಗೆ ಆನೆ ದಾಳಿ ಇಬ್ಬರ ದುರ್ಮರಣ

Share Information

ಕಡಬ, ಫೆಬ್ರವರಿ 20: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ.

ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ ಮನೆಯಿಂದ ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿದೆ.

ಯುವತಿ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆ ಆನೆ ಅಟ್ಟಹಾಸ ಮೆರೆದಿದೆ. ರಮೇಶ್ ರೈ (55) ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

 

 


Share Information
Advertisement
Click to comment

You must be logged in to post a comment Login

Leave a Reply