Connect with us

LATEST NEWS

ವ್ಯಾಪಾರ ಮಾಡುವುದು ಸರಕಾರದ ಕೆಲಸವಲ್ಲ – ಯು.ಟಿ ಖಾದರ್

ಮಂಗಳೂರು ಅಗಸ್ಟ್ 19: ದಕ್ಷಿಣಕನ್ನಡ ಜಿಲ್ಲೆಯ ಅಧಿಕಾರಿಗಳು ರಾಜಕೀಯ ವ್ಯಕ್ತಿಗಳ ಮಾತಿನಂತೆ ಆದೇಶಗಳನ್ನು ಹೊರಡಿಸುತ್ತಿರುವುದು ದುರದೃಷ್ಠಕರ ಎಂದು ಶಾಸಕ ಯು.ಟಿ ಖಾದರ್ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ನೆಪಹೇಳಿ ಏಕಾಏಕಿ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಿಗಳನ್ನು ಎಪಿಎಂಸಿ ಸ್ಥಳಾಂತರ ಮಾಡಿದ್ದರು. ಆದರೆ ಅಲ್ಲಿ ಯಾವುದೇ ಮೂಲಭೂತ ಸೌಕರ್ಯ ನೀಡದೇ ಭಾರೀ ಮಳೆಯಿಂದಾಗಿ ಎಪಿಎಂಸಿಯಲ್ಲಿ ತೀವ್ರ ಸಮಸ್ಯೆ ಉಂಟಾಗಿದ್ದು, ಇದರಿಂದಾಗಿ ವ್ಯಾಪಾರಿಗಳಿಗೆ ಬಹಳ ಕಷ್ಟ ಉಂಟಾಗಿದೆ. ಬಳಿಕ ಆಗಸ್ಟ್ 13 ರಂದು ಹೈಕೋರ್ಟ್‌ನಲ್ಲಿದ್ದ ಪ್ರಕರಣವನ್ನು ಮಂಗಳೂರು ಮಹಾನಗರ ಪಾಲಿಕೆ ಹಿಂತೆಗೆದುಕೊಂಡಿದ್ದು ಚಿಲ್ಲರೆ ವ್ಯಾಪಾರಿಗಳು ಕೇಂದ್ರ ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭಿಸಿದ್ದರು ಎಂದಿದ್ದಾರೆ.


ಆದರೆ ಜಿಲ್ಲಾಡಳಿತ ಮಾತ್ರ ಕೆಲವು ರಾಜಕೀಯ ವ್ಯಕ್ತಿಗಳ ಒಪ್ಪಿಗೆಯಂತೆ ಆದೇಶ ಹೊರಡಿಸುತ್ತಿರುವುದು ದುರದೃಷ್ಟಕರ. ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಸರ್ಕಾರವು ಕಾಳಜಿಯನ್ನು ಹೊಂದಿದ್ದರೆ, ಅವರು ಕೇಂದ್ರ ಮಾರುಕಟ್ಟೆಯಲ್ಲಿನ ವ್ಯಾಪಾರಸ್ಥರು ಹಾಗೂ ಬಂದರ್‌ನಲ್ಲಿರುವ ಮೀನು ಮಾರಾಟಗಾರರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಬೇಕಾಗಿತ್ತು. ಈಗ ಎಪಿಎಂಸಿ ಅಧ್ಯಕ್ಷರು ವ್ಯಾಪಾರಿಗಳು ಎಪಿಎಂಸಿಗೆ ವಾಪಾಸ್‌ ಬರುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಎಪಿಎಂಸಿ ಕಾಯ್ದೆಯನ್ನು ರದ್ದುಗೊಳಿಸಿದಾಗ ಅವರು ಯಾಕೆ ಮೌನವಾಗಿದ್ದರು ಎಂದು ಪ್ರಶ್ನಿಸಿರುವ ಅವರು, ವ್ಯಾಪಾರ ಮಾಡುವುದು ಸರ್ಕಾರದ ಕೆಲಸವಲ್ಲ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *