Connect with us

    LATEST NEWS

    ಕೊರೊನಾ ಸೋಂಕಿತನ ಮೃತದೇಹದಿಂದ ವೈರಸ್ ಹರಡಲ್ಲ – ಶಾಸಕ ಖಾದರ್

    ಮಂಗಳೂರು ಜೂನ್ 24 : ಪಿಪಿಇ ಕಿಟ್ ಇಲ್ಲದೇ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿ ಭಾರಿ ವಿವಾದ ಸೃಷ್ಠಿಸಿದ್ದ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಈಗ ಈ ಕುರಿತಂತೆ ಸ್ಪಷ್ಟನೆ ನೀಡಿದ್ದು. ಮೃತ ದೇಹದಿಂದ ಕೊರೊನಾ ಸೊಂಕು ಹರಡುವುದಿಲ್ಲ ಎಂದು ತಿಳಿಸಿದ್ದಾರೆ.


    ಮಂಗಳೂರಿನಲ್ಲಿ ಮಾತನಾಡಿದ ಅವರು ಅಂತ್ಯ ಸಂಸ್ಕಾರದಲ್ಲಿ ಪಿಪಿಇ ಕಿಟ್ ಧರಿಸದೆ ಭಾಗಿಯಾದ ಕುರಿತು ಸ್ಪಷ್ಟನೆ ನೀಡಿದರು, ಅಂತ್ಯಸಂಸ್ಕಾರದಲ್ಲಿ ಕೆಲಸ ಮಾಡಬೇಕೆಂಬ ಭಾವನೆ ಬಂತು. ಆದ್ದರಿಂದ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದೇನೆ. ಸೋಂಕಿತನ ಮೃತದೇಹದಿಂದ ವೈರಸ್ ಹರಡುವುದಿಲ್ಲ. ಮೃತದೇಹದಿಂದ ವೈರಸ್ ಹರಡುತ್ತೆ ಎಂದು ವೈದ್ಯಕೀಯ ಅಧ್ಯಯನ ಹೇಳಿಲ್ಲ. ಆದ್ದರಿಂದ ಪಿಪಿಐ ಕಿಟ್‍ನ ಅಗತ್ಯ ಇಲ್ಲ ಎಂದು ಹೇಳಿದರು.


    ಮೃತ ತಂದೆಯ ದೇಹವನ್ನು ಅಂತಿಮವಾಗಿ ನೋಡಲು ಮೃತರ ಮಕ್ಕಳು ಸಹ ಬರಲ್ಲ. ಜನ ಅಷ್ಟು ಭಯಭೀತರಾಗಿದ್ದಾರೆ. ಧಾರ್ಮಿಕ ವಿಧಿವಿಧಾನ ಮಾಡೋಕೆ ಜನರಿಗೆ ಹೆದರಿಕೆ ಇದೆ. ಕಾನೂನು ಪ್ರಕಾರ ಪಿಪಿಇ ಕಿಟ್ ಧರಿಸದೇ ಇರುವುದು ತಪ್ಪು. ಆದರೆ ನಾನು ಕೊರೊನಾ ಕುರಿತು ಜನರಿಗೆ ಮನವರಿಕೆ ಮಾಡಲು ಪಿಪಿಇ ಕಿಟ್ ಧರಿಸಿಲ್ಲ. ಜನರು ಧಾರ್ಮಿಕ ವಿಧಿವಿಧಾನ ಪ್ರಕಾರ ಅಂತ್ಯಕ್ರಿಯೆ ಮಾಡಬಹುದು ಎಂದರು.

    ಈ ದೇಶದಲ್ಲಿ ರಚಿಸಲಾಗುವ ಎಲ್ಲಾ ಕಾನೂನುಗಳು ಕೇವಲ ಜನಸಾಮಾನ್ಯರಿಗೆ ಮಾತ್ರವಿದ್ದು, ಜನಪ್ರತಿನಿಧಿಗಳಿಗೂ ಕಾನೂನಿಗೂ ಯಾವುದೇ ಸಂಬಂಧವಿಲ್ಲ ಎನ್ನುವುದು ಖಾದರ್ ಅವರ ಈ ಹೇಳಿಕೆಯಿಂದ ತಿಳಿಯುತ್ತದೆ.

    Share Information
    Advertisement
    Click to comment

    You must be logged in to post a comment Login

    Leave a Reply