LATEST NEWS
ರಮಾನಾಥ ರೈ ನಿವೃತ್ತಿಯಾಗಲು ನಾವು ಬಿಡುವುದಿಲ್ಲ – ಖಾದರ್
ಮಂಗಳೂರು ಮೇ 16: ತಾವು ಇನ್ನು ಮುಂದೆ ಚುನಾವಣೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ರಮಾನಾಥ ರೈ ಅವರು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ರಮಾನಾಥ ರೈ ಅವರು ಅತ್ಯಂತ ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿ ಗೆ ಅಪಾರವಾದ ಕೊಡುಗೆಯನ್ನು ಕೊಟ್ಟವರು. ಅತ್ಯಂತ ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿ ಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯ ದಲ್ಲಿ ಯಾವಾಗಲೂ ಇರುತ್ತಾರೆ, ಮುಂದೆಯು ಇರುತ್ತಾರೆ. ಚುನಾವಣಾ ರಾಜಕೀಯ ದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
You must be logged in to post a comment Login