LATEST NEWS
ಅಪ್ರತಿಮ ಹುಲಿವೇಷಧಾರಿ ಕಾಡುಬೆಟ್ಟು ಅಶೋಕ್ ರಾಜ್ ಇನ್ನಿಲ್ಲ…!

ಉಡುಪಿ, ಫೆಬ್ರವರಿ 01: ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಅಶೋಕ್ ರಾಜ್ ಅವರು ಇಂದು ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ 36 ವರ್ಷಗಳಿಂದ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಉಡುಪಿಯಲ್ಲಿ ಸಾಂಪ್ರದಾಯಿಕ ಹುಲಿವೇಷ ಧರಿಸಿದ್ದ ಅವರು 28 ವರ್ಷಗಳಿಂದ ಹುಲಿವೇಷ ತಂಡ ರಚಿಸಿದ್ದರು. ಉಭಯ ಜಿಲ್ಲೆಗಳಲ್ಲಿ ಅಶೋಕ್ ರಾಜ್ ತಂಡವು ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು. ಮೃತರು ಪತ್ನಿ,ಇಬ್ಬರು ಪುತ್ರಿಯರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.