Connect with us

    LATEST NEWS

    ಕೈಕಂಬ – ಖಾಸಗಿ ಬಸ್ ತಡೆದು ಪ್ರತಿಭಟನೆ…!!

    ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಖಾಸಗಿ ಬಸ್ ಗಳ ಧಾವಂತಕ್ಕೆ ಇತ್ತೀಚೆಗೆ ದ್ವಿಚಕ್ರ ವಾಹನಗಳ ಅಪಘಾತ ಹೆಚ್ಚಾಗುತ್ತಿದೆ. ಈ ನಡುವೆ ನಿನ್ನೆ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ನಿನ್ನೆ ಅಪಘಾತದಲ್ಲಿ ಮೃತಪಟ್ಟಿದ್ದರು.ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆ ಇಂದು ಕೈಕಂಬ ಜಂಕ್ಷನ್ ನಲ್ಲಿ ಖಾಸಗಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.

    ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತು ಕತೆ ನಡೆಸುತ್ತಿದ್ದಾರೆ. ಬಸ್ ಗಳನ್ನು ಸ್ಥಳದಿಂದ ತೆರಳಲು ಬಿಡದ ಹಿನ್ನೆಲೆಯಲ್ಲಿ ಸಾಲಾಗಿ ನಿಂತಿದ್ದು, ಮೂಡುಬಿದಿರೆ- ಮಂಗಳೂರು, ಬಜಪೆ, ಪೊಳಲಿ ಬಿಸಿರೋಡ್ ಮೊದಲಾದೆಡೆಗೆ ತೆರಳುವ ಪಯಾಣಿಕರು ಬಸ್ ನಲ್ಲೇ ಬಾಕಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply