Connect with us

KARNATAKA

ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ :  ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಚಿತ್ತಾಪೂರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಚಿತ್ತಾಪೂರದಿಂದ  ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರು ಮಣಿಕಂಠ ಅವರ ವಾಹನ ತಡೆದು ಬಿಯರ್ ಬಾಟಲ್​ಗಳಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ.

ಸದ್ಯ ಘಟನೆಯಲ್ಲಿ ಗಾಯಗೊಂಡಿರುವ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *