KARNATAKA
ಕಲಬುರಗಿ -ಅಪಘಾತಕ್ಕೆ ಬೆಂಕಿಗಾಹುತಿಯಾದ ಬಸ್ 7 ಜನ ಸಜೀವ ದಹನ
ಕಲಬುರಗಿ ಜೂನ್ 03: ಖಾಸಗಿ ಬಸ್ ಮತ್ತು ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಬೆಂಕಿಗಾಹುತಿಯಾಗಿ ಏಳು ಜನರು ಬಸ್ ನ ಒಳಗೆ ಸಿಲುಕಿ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಹೊರವಲಯದ ಹೆದ್ದಾರಿಯಲ್ಲಿ ನಡೆದಿದೆ.
ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಮರಳುವಾಗ ಅಪಘಾತ ಸಂಭವಿಸಿದೆ. 22 ಜನರನ್ನು ಬಸ್ನಿಂದ ಹೊರ ಬಂದಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಟೆಂಪೊ ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
You must be logged in to post a comment Login