Connect with us

    DAKSHINA KANNADA

    ಕಲ್ಕುಂದ – ಭಾರೀ ಮಳೆ ಗಾಳಿಗೆ ಬೃಹತ್ ಮರ ಬಿದ್ದು ವೃದ್ದೆ ಸಾವು

    ಕಲ್ಕುಂದ ಮೇ 15: ತೋಟಕ್ಕೆ ತೆರಳಿದ್ದ ವೇಳೆ ಮರವೊಂದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ.

    ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಜೊತೆ ಮಳೆಯಾಗುತ್ತಿದ್ದು, ಈ ವೇಳೆ ಇವರು ತೋಟದಲ್ಲಿ ಕಟ್ಟಿದ್ದ ಜಾನುವಾರು ತರಲು ಹೋಗಿದ್ದರು. ಈ ವೇಳೆ ತೋಟದಲ್ಲಿದ್ದ ಮರವೊಂದು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರು ಮತ್ತು ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply