Connect with us

    BANTWAL

    ಕಲ್ಲಡ್ಕ ರಸ್ತೆ ಅವ್ಯವಸ್ಥೆಗೆ ಚರಂಡಿಗೆ ಜಾರಿದ ಲಾರಿ….!!

    ಬಂಟ್ವಾಳ ಅಕ್ಟೋಬರ್ 01: ಕಲ್ಲಡ್ಕ ಬಳಿಯ ಸರ್ವಿಸ್ ರಸ್ತೆ ಅವ್ಯವಸ್ಥೆಗೆ ವಾಹನ ಸವಾರರು ದಿನಾ ಸಂಕಷ್ಟಪಡುತ್ತಿದ್ದು, ಇಂದು ಘನಗಾತ್ರದ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಜಾರಿ ಬಿದ್ದಿದ್ದು, ಪರಿಣಾಮ ಟ್ರಾಫಿಕ್ ಜಾಮ್ ಆದ ಘಟನೆ ಆದಿತ್ಯವಾರ ಬೆಳಿಗ್ಗೆ ವೇಳೆ ನಡೆದಿದೆ.


    ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಪ್ಲೈಓವರ್ ನಿರ್ಮಾಣದ ಕೆಲಸ ನೆಡಯುತ್ತಿದ್ದು, ಸರ್ವಿಸ್ ರಸ್ತೆ ಸರಿಯಾಗಿ ನಿರ್ಮಾಣ ಮಾಡದ ಕಾರಣ ದಿನಾ ಸಮಸ್ಯೆಯಾಗುತ್ತಿದೆ. ಈ ನಡುವೆ ಇಂದು ಕಲ್ಲಡ್ಕದ ಪೇಟೆಯಿಂದ ಸ್ವಲ್ಪ ಮುಂದೆ ಪೂರ್ಲಿಪಾಡಿ ನಡುವೆ ಸರ್ವೀಸ್ ರಸ್ತೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ತಾತ್ಕಾಲಿಕವಾಗಿ ಮಾಡಲಾದ ಚರಂಡಿಗೆ ಲಾರಿ ಬಿದ್ದಿದೆ.

    ಬೃಹತ್ ಗಾತ್ರದ ಗೂಡ್ಸ್ ಲಾರಿಯ ಬಿದ್ದ ಪರಿಣಾಮ ಇಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಲ್ಲಡ್ಕ ಪೇಟೆ ಉಳಿಸುವ ಸಲುವಾಗಿ ಇಲ್ಲಿ ಪ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದ್ದು, ಪ್ಲೈ ಓವರ್ ನಿರ್ಮಾಣ ಮಾಡುವ ಸಂದರ್ಭ ಎರಡು ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ಸರ್ವೀಸ್ ರಸ್ತೆಯನ್ನು ಪರಿಪೂರ್ಣ ರೀತಿಯಲ್ಲಿ ಮಾಡದೆ ಜನರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ ಎಂಬುದು ಸಾರ್ವಜನಿಕ ಆರೋಪ.

    Share Information
    Advertisement
    Click to comment

    You must be logged in to post a comment Login

    Leave a Reply