BANTWAL
ಸಂಸದ ಬ್ರಿಜೇಶ್ ಚೌಟ ಸೂಚನೆ ಬೆನ್ನಲ್ಲೇ – ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತ

ಬಂಟ್ವಾಳ ಜೂನ್ 02: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದ್ದರು, ಅದರಂತೆ ಇದೀಗ ಇಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.

ಇಂದು ಬೆಳಿಗ್ಗೆ 10.30 ಗಂಟೆಗೆ ಫೈ ಓವರ್ ನ ಆರಂಭಿಕ ಭಾಗವಾದ ಪೂರ್ಲಿಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಹಿರಿಯ ಮುದಾಳು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು ಪ್ರೈಓವರ್ ಸಂಚಾರವನ್ನು ಸ್ವಾಗತಿಸಿದ್ದಾರೆ.
ಕಲ್ಲಡ್ಕದ ಪೂರ್ಲಿಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.