Connect with us

    LATEST NEWS

    ಕಾಂಗ್ರೇಸ್ ಪಕ್ಷದ ಕೆಲವರು ಅಯೋಧ್ಯೆ ಹೋಗುವ ಮಾತನಾಡಿದ್ದಾರೆ ಅಂಥವರ ಸಂಖ್ಯೆ ಹೆಚ್ಚಾಗಬೇಕಿದೆ – ಕಲ್ಲಡ್ಕ ಪ್ರಭಾಕರ್ ಭಟ್

    ಪುತ್ತೂರು ಜನವರಿ 12:ಆಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕರು ತೆರಳದೇ ಇರಲು ನಿರ್ಧರಿಸಿರುವುದು ಮೂರ್ಖತನದ ಕೆಲಸ ಎಂದು ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ.


    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶ್ರೀರಾಮ ನಮಗೆ ಮಾತ್ರ ಅಲ್ಲ, ಇಡೀ ಜಗತ್ತಿಗೆ ಬೇಕಾದವನು, ರಾಮನ ಪ್ರತಿಷ್ಠಾಪನೆ ಸಂದರ್ಭದಲ್ಲಿ ಹೋಗದವರು ರಾಮ ಪ್ರತಿಪಾದಿಸಿದ ಧರ್ಮ,ಸಂಸ್ಕೃತಿ, ಮೌಲ್ಯಗಳನ್ನು ತಿರಸ್ಕಾರ ಮಾಡಿದಂತೆ, ರಾಮಮಂದಿರ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ, ಈ ದೇಶದ ಪ್ರಧಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಗೌರವದ ಸಂಗತಿ. ಪ್ರಾಣ ಪ್ರತಿಷ್ಠೆಯ ವೈದಿಕ ವಿಧಿ-ವಿಧಾನಗಳನ್ನು ವೈದಿಕರೇ ಮಾಡುತ್ತಾರೆ. ಆ ಸಂದರ್ಭದಲ್ಲಿ ಪ್ರಧಾನಿ ಉಪಸ್ಥಿತಿ ಇರುವುದು ಒಂದು ವೈಶಿಷ್ಟ್ಯ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

    ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಅನ್ನೋ ಕಾರಣಕ್ಕೆ ರಾಮನ ಪ್ರತಿಷ್ಠಾಪನೆಗೆ ಹೋಗದಿರುವುದು ಕಾಂಗ್ರೇಸ್ ಪಕ್ಷದ ಮೂರ್ಖತನ ಎಂದ ಅವರು ಈ ನಿರ್ಧಾರ ಸಮಾಜದಲ್ಲಿ ಕೆಟ್ಟ ಸಂದೇಶವನ್ನು ಸಾರಲಿದೆ. ಸುದೈವ ಅಂದರೆ ಯಾರು ಅಯೋಧ್ಯೆಗೆ ಹೋಗದಿರಲು ನಿರ್ಧರಿಸಿದ್ದಾರೋ, ಅವರದೇ ಪಕ್ಷದ ಕೆಲವರು ಹೋಗುವ ಮಾತನಾಡಿದ್ದಾರೆ. ಅಂಥವರು ನ್ಯಾಯಧರ್ಮದ ಮಾರ್ಗದಲ್ಲಿರುವವರು, ಅಂತವರ ಸಂಖ್ಯೆ ಹೆಚ್ಚಾಗಬೇಕಿದೆ. ಎಲ್ಲಾ ಪಕ್ಷಗಳಲ್ಲಿ ಆ ರೀತಿಯ ಯೋಚನೆ ಬರಬೇಕಿದೆ ಎಂದ ಅವರು ,ರಾಮ ಪ್ರತಿಷ್ಠೆ ಪಕ್ಷಾತೀತವಾದ ವಿಚಾರ. ಈ ದೇಶ ರಾಮನ ದೇಶ, ವೈದಿಕ ಸಂಸ್ಕೃತಿ ಹಾಗೆ,ಹೀಗೆ ಎನ್ನುವ ಸ್ವಾಮೀಜಿಗಳು ತಮ್ಮ ಪ್ರತಿಷ್ಠೆಯನ್ನು ಬಿಡಬೇಕು ರಾಮ ಎಲ್ಲರಿಗೂ ಬೇಕಾದವ, ರಾಮ ಪ್ರತಿಷ್ಠೆ ಅದು ನಮ್ಮ ಆತ್ಮದ ಪ್ರತಿಷ್ಠೆ, ಕೆಲವು ಸ್ವಾಮೀಜಿಗಳು ರಾಮನನ್ನು ಕೆಳ ಜಾತಿಯವರು ಮುಟ್ಟುತ್ತಾರೆ ಎನ್ನುವ ಆರೋಪ ಮಾಡುತ್ತಾರೆ. ರಾಮನನ್ನು ಎಲ್ಲರೂ ಮುಟ್ಟಬೇಕು. ಕೆಳಜಾತಿಯವನು ಮುಟ್ಟುತ್ತಾನೆ ಎನ್ನುತ್ತಾರೆ. ರಾಮನನ್ನು ಯಾಕೆ ಮುಟ್ಟಬಾರದು, ರಾಮನನ್ನು ಎಲ್ಲರೂ ಮುಟ್ಟಬೇಕು

    ಅದರಲ್ಲೇ ನಮ್ಮ ಜೀವನ ಇರುವಂತಹುದು. 1989 ರಲ್ಲಿ ರಾಮಮಂದಿರದ ಪ್ರತಿಷ್ಟಾಪನೆ ನಡೆದಾಗ ಮೊದಲ ಇಟ್ಟಿಗೆ ಇಟ್ಟಿರೋದು ಉಪೇಕ್ಷಿತ ಸಮುದಾಯದ ಬಂಧು ಆಗಿದ್ದವರು. ಜಾತಿ ಬಗ್ಗೆ ಮಾತನಾಡಿ ಸ್ವಾಮೀಜಿಗಳು ತಮ್ಮ ಗೌರವಕ್ಕೆ ಚ್ಯುತಿ ತರಬೇಡಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಮನವಿ ಮಾಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply