FILM
ಕಾಂತಾರ ಚಿತ್ರತಂಡಕ್ಕೆ ಗೆಲವು….ಥೈಕ್ಕುಡಂ ಬ್ರಿಡ್ಜ್ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ತಿರುವನಂತಪುರಂ: ಕಾಂತಾರ ಸಿನೆಮಾದ ಜೀವಾಳವಾಗಿದ್ದ ವರಾಹ ರೂಪಂ ಹಾಡಿ ವಿವಾದದಲ್ಲಿ ಇದೀಗ ಚಿತ್ರ ತಂಡ ಗೆಲುವನ್ನು ಸಾಧಿಸಿದ್ದು, ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿದ ವರಾಹರೂಪಂ ಹಾಡಿನ ಬರಹಗಾರ ಶಶಿಧರ್ ಕಾವೂರು, ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದೆ ಮತ್ತು ವರಾಹರೂಪಂ ಹಾಡಿಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದೆ. ನ್ಯಾಯ ಗೆದ್ದಿತು. ಜೈ ತುಳುನಾಡು ಎಂದು ಬರೆದುಕೊಂಡಿದ್ದಾರೆ.
You must be logged in to post a comment Login