Connect with us

    UDUPI

    ಗೋವಿಗೆ ಸಾಷ್ಟಾಂಗ ನಮಸ್ಕರಿಸಿದ ಕಾಣಿಯೂರು ಶ್ರೀಗಳ ಪೋಟೋ ವೈರಲ್

    ಉಡುಪಿ ಜುಲೈ 10: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರು ಗೋವಿಗೆ ಸಾಷ್ಟಾಂಗ ನಮಸ್ಕರಿಸಿದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ.


    ಸ್ವಾಮೀಜಿಯಾಗಿ ದೀಕ್ಷೆ ಪಡೆದ ಸನ್ಯಾಸಿಗಳು ದೇವರು, ತಾಯಿ, ಗುರು ಹಾಗೂ ಗೋವು ಹೊರತು ಇತರರಿಗೆ ನಮಸ್ಕರಿಸುವ ಕ್ರಮವಿಲ್ಲ.. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರು ಮಠದ ಪಟ್ಟದ ದೇವರಾದ ಯೋಗ ನರಸಿಂಹ ಮತ್ತು ಶ್ರೀ ಕೃಷ್ಣ ದೇವರಿಗೆ ಪೂಜೆ ನೆರವೇರಿಸಿದ ಅನಂತರ ಗೋಪೂಜೆ ಮಾಡಿ ಗೋವಿನ ಕಾಲಿಗೆರಗಿ ಸಾಷ್ಟಾಂಗ ನಮಸ್ಕಾರ ಮಾಡುವುದು ಶ್ರೀಗಳ ನಿತ್ಯ ದಿನಚರಿ. ಅದರಂತೆ ಇತ್ತೀಚೆಗೆ ಸ್ವಾಮಿಗಳು ಗೋವಿಗೆ ಸಾಷ್ಟಾಂಗ ನಮಸ್ಕರಿಸಿದ ಪೋಟೋ ಸುಧೀರ್‌ ಭಟ್‌ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಇದು ಜಾಲತಾಣಗಳಲ್ಲಿ ವೈರಲ್ ಆಗಿ ಮೆಚ್ಚುಗೆ ಪಡೆದಿದೆ.


    ಗೋವಿನ ಬಗ್ಗೆ ವಿಶೇಷ ಪ್ರೀತಿ ಇರುವ ಶ್ರೀಗಳು ದೇಸಿ ತಳಿಯ ಗೋವುಗಳನ್ನು ಸಾಕುತ್ತಿದ್ದು, ಇವರ ಹಿಂದಿನ ಪರ್ಯಾಯ ಅವಧಿಯಲ್ಲಿ ಕೃಷ್ಣಮಠದಲ್ಲಿ ಪ್ರಥಮ ಗೋ ಸಮ್ಮೇಳನವನ್ನೂ ಆಯೋಜಿಸಿದ್ದರು..

    Share Information
    Advertisement
    Click to comment

    You must be logged in to post a comment Login

    Leave a Reply