Connect with us

LATEST NEWS

ಯುವವಾಹಿನಿ (ರಿ.) ಕಂಕನಾಡಿ ಘಟಕ ವತಿಯಿಂದ ಮಹಿಳೆಯರಿಗೆ ಸ್ವಉದ್ಯೋಗ ಉಚಿತ ತರಬೇತಿ

ಮಂಗಳೂರು ಫೆಬ್ರವರಿ 28: ಯುವವಾಹಿನಿ (ರಿ.) ಕಂಕನಾಡಿ ಘಟಕ ಹಾಗೂ ಭಾರತ ಸರ್ಕಾರ ದತ್ತೋಪಂಥ,ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ,ಮಂಗಳೂರು. ಇವರ ವತಿಯಿಂದ ಮಹಿಳೆಯರಿಗೆ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಗಾರವು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನ ಸಭಾಂಗಣದಲ್ಲಿ ದಿನಾಂಕ 24-02-2024 ಶನಿವಾರ ಬೆಳಿಗ್ಗೆ 9:30 ರಿಂದ 2:00 ಗಂಟೆಯವರೆಗೆ ನಡೆಯಿತು.


ದೀಪ ಪ್ರಜ್ವಲನೆಯನ್ನು ಶ್ರೀ ಬ್ರಹ್ಮ ಮುಗೆರ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷರಾದ ಮಾನ್ಯ ಶ್ರೀ ಉಮಾನಾಥ್ ಕೋಟ್ಯಾನ್ ರವರು ನೆರವೇರಿಸಿದರು ಹಾಗೂ ಪ್ರಾರ್ಥನೆಯನ್ನು ಸಾಕ್ಷಿ ಎಲ್ ನೆರವೇರಿಸಿದರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ರೇಖಾ ಗೋಪಾಲ್ ಹಾಗೂ ಶ್ರೀಮತಿ ಹರಿಣಿ ಜೆ ರಾವ್ ಇವರು ಸ್ವಉದ್ಯೋಗಕ್ಕೆ ಬೇಕಾದ ಉತ್ಪನ್ನಗಳ ತಯಾರಿಕೆಯ ಜೊತೆಗೆ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಮಾರಾಟದ ಮಾಹಿತಿಯನ್ನು ನೀಡಿದರು.

ಸುಮಾರು 65ಕ್ಕೂ ಹೆಚ್ಚು ಶಿಬಿರಾರ್ಥಿಗಳು ಈ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಕಮಿಟಿ ಸದಸ್ಯರು ಮಾಜಿ ಅಧ್ಯಕ್ಷರುಗಳು ಪಾಲ್ಗೊಂಡರು. ನಮ್ಮ ಘಟಕದ ಮಹಿಳಾ ನಿರ್ದೇಶಕರಾದ ಶ್ರೀಮತಿ ಶೋಭಾ ಶೇಖರ್ ಅವರ ಧನ್ಯವಾದಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಳಿಸಲಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *