ಉಡುಪಿ ಅಗಸ್ಟ್ 08: ಕಾಂತಾರ ಸಿನೆಮಾದಲ್ಲಿ ಲಾಯರ್ ಪಾತ್ರ ಮಾಡಿದ್ದ ಉಡುಪಿ ಮೂಲದ ಹಿರಿಯ ಕಲಾವಿದ ಪ್ರಭಾಕರ ಕಲ್ಯಾಣಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮನೆಯಲ್ಲಿರುವಾಗಲೇ ಕುಸಿದು ಬಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪ್ರಭಾಕರ ಕಲ್ಯಾಣಿ ಅವರು ‘ಕಾಂತಾರ’ ಸಿನಿಮಾದಲ್ಲಿ ನ್ಯಾಯವಾದಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಪೆರ್ಡೂರಿನವರಾದ ಪ್ರಭಾಕರ ಕಲ್ಯಾಣಿ ಅವರು ಈ ಹಿಂದೆ ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗಿಯಾಗಿದ್ದರು. ನಿವೃತ್ತಿ ಹೊಂದಿದ್ದ ಅವರು, ರಂಗಭೂಮಿಯಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದರು. ಹಲವಾರು ನಾಟಕಗಳಲ್ಲಿಯೂ ಬಣ್ಣ ಹಚ್ಚಿದ್ದರು.