LATEST NEWS
ಕಾಪು ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಸಾವು
ಉಡುಪಿ ಸೆಪ್ಟೆಂಬರ್ 11: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ. ಮೃತ ಪಟ್ಟ ಯುವತಿ ಮಂಗಳೂರು ಮೂಲದ ಆಶ್ರಿತಾ ಸಲ್ಡಾನ್ಹಾ(24) ಎಂದು ಗುರುತಿಸಲಾಗಿದೆ. ಇನ್ನು ಕಾರು ಚಾಲಕ ನಿಹಾಲ್ ದಿನೇಶ್ ಶೆಟ್ಟಿ(24) ಎಂಬಾತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಬಳಿ ಇಂದು ಮಧ್ಯಾಹ್ನ ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ನ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಘಟನೆಯ ಸಂದರ್ಭ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದರು. ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಇನ್ನೂ ಮೂವರ ಸ್ಥಿತಿ ಗಂಭೀರ ಎಂದು ಹೇಳಲಾಗಿದೆ.
You must be logged in to post a comment Login