Connect with us

LATEST NEWS

ಕಾಪು – ದೀಪಾವಳಿ ಆಚರಣೆ ಸಂದರ್ಭ ವಿಷ ಜಂತು ಕಡಿದು ಯುವಕ ಸಾವು

ಉಡುಪಿ ನವೆಂಬರ್ 06: ದೀಪಾವಳಿ ಸಂದರ್ಭ ಗದ್ದೆಗೆ ಬೆಳಕು ತೋರಿಸಲು ಹೋಗಿದ್ದ ಯುವಕನಿಗೆ ವಿಷ ಜಂತುವೊಂದು ಕಡಿದು ಸಾವಮಪ್ಪಿರುವ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತರನ್ನು ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಎಂದು ತಿಳಿದು ಬಂದಿದೆ.


ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಕುಟುಂಬಸ್ಥರು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆ ಬಳಿಕ ಚೇತರಿಸಿಕೊಂಡಿದ್ದ ರೋಹಿತ್ ಅವರಿಗೆ ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *