LATEST NEWS
ಕಾಪು ಮಾರಿಗುಡಿ ಪೂಜೆ ವೇಳೆ ಮುಸ್ಲಿಂಮರಿಗೆ ಅಂಗಡಿ ತೆರೆಯಲು ಅವಕಾಶ ನಿಡಬೇಡಿ – ಹಿಂದೂ ಸಂಘಟನೆಗಳ ಪತ್ರ
ಉಡುಪಿ ಮಾರ್ಚ್ 19: ಮಾರ್ಚ್ 22 ಮತ್ತು ಮಾರ್ಚ್ 23 ರಂದು ಕಾಪುವಿನ ಪ್ರಸಿದ್ಧ ಮೂರು ಮಾರಿಗುಡಿಗಳಲ್ಲಿ ನಡೆಯುವ ‘ಸುಗ್ಗಿ ಮಾರಿ ಪೂಜೆ’ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಮರಿಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬೇಡಿ ಎಂದು ಹಿಂದೂ ಕಾರ್ಯಕರ್ತರು ಕಾಪು ಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಪತ್ರದಲ್ಲಿ ದೇವಸ್ಥಾನದ ಉತ್ಸವದ ವೇಳೆ ಮುಸ್ಲಿಂ ಸಮುದಾಯದವರಿಗೆ ಅಂಗಡಿ ತೆರೆಯಲು ಅವಕಾಶ ನೀಡಿದರೆ ಮುಂದಿನ ಪರಿಣಾಮಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಪತ್ರದಲ್ಲಿ ಅಧಿಕಾರಿಗೆ ಬೆದರಿಕೆ ಹಾಕಲಾಗಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಅಧಿಕಾರಿ ವೆಂಕಟೇಶ ನಾವಡ ಮುಸ್ಲಿಮರ ಅಂಗಡಿ/ಮುಂಗಟ್ಟು ತೆರೆಯಲು ಅವಕಾಶ ನೀಡಬೇಡಿ ಎಂದು ನಮಗೆ ಪತ್ರ ಬಂದಿದೆ. ಆದರೆ ಭಾರತ ಜಾತ್ಯತೀತ ದೇಶವಾಗಿರುವುದರಿಂದ ಎಲ್ಲಾ ಸಮುದಾಯಗಳ ವ್ಯಾಪಾರಿಗಳು ಅಂಗಡಿಗಳನ್ನು ತೆರೆಯಬಹುದು. “ನಾವು ಇನ್ನೂ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
You must be logged in to post a comment Login