Connect with us

    BANTWAL

    ರಾಮಭಕ್ತರ ಬಂಧನ ಖಂಡಿಸಿ ಬಂಟ್ವಾಳದಲ್ಲಿ ಹಿಂಜಾವೇ ಪ್ರತಿಭಟನೆ

    ಬಂಟ್ವಾಳ:   ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೋಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

    ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ  ಜಿಲ್ಲಾ ಸಂಯೋಜನಕ್ ನರಸಿಂಹ ಮಾಣಿ , ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಸಭೆಯಲ್ಲಿ ಮಾತನಾಡಿದರು ‌. ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳು ಕೇಳಿ ಬಂದವು.
    ಹಿಂದೂ ಕಾರ್ಯಕರ್ತ ಶ್ರೀಕಾಂತ್ ಸಹಿತ ಕಾರ್ಯಕರ್ತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಿ ಎಂದು ಆಗ್ರಹ ಮಾಡಿದರು.
    ಬಿಡುಗಡೆ ಮಾಡುವ ಕೆಲಸ ಮಾಡದೆ ಮತ್ತೆ ಮತ್ತೆ ಹಿಂದೂ ಕಾರ್ಯಕರ್ತರನ್ನು ಕೆಣಕಲು ಹೋದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು‌
    ಅಯೋಧ್ಯೆಯ ಸಂಭ್ರಮದಲ್ಲಿರುವ ಹಿಂದೂ ಸಮಾಜದ ಮೇಲೆ ಸಿದ್ದರಾಮಯ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು.
    ಪ್ರತಿ ಬಾರಿ ಹಿಂದೂ ಸಮಾಜದ ಮೇಲೆ ನಡೆಯುವ ದಾಳಿಯನ್ನು ಖಂಡಿಸುತ್ತೇವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
    ಪ್ರಮುಖರಾದ ಸಮಿತ್ ರಾಜ್ ಧರೆಗುಡ್ಡೆ, ಅರುಣ್ ಸಜೀಪ, ಗಣೇಶ್ ಕುಲಾಲ್ ಕೆದಿಲ, ದಿನೇಶ್ ದಂಬೆದಾರ್, ಪ್ರಭಾಕರ್ ಪ್ರಭು, ರವಿರಾಜ್ ಬಿಸಿರೋಡು, ರಮಾನಾಥ ರಾಯಿ,ಹರೀಶ್ ತಲೆಂಬಿಲ, ರವಿ‌ಕೆಂಪುಗುಡ್ಡೆ, ಪ್ರಶಾಂತ್ ಇರಾ, ಪ್ರಶಾಂತ್ ಕೆಂಪುಗುಡ್ಡೆ, ಶೇಖರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply