Connect with us

    LATEST NEWS

    ಇಲೆಕ್ಟ್ರಿಕ್ ಸ್ಕೂಟರ್ ಗೆ ಅಡ್ಡ ಬಂದ ಪ್ರಾಣಿ – ಸ್ಕೂಟರ್ ಸವಾರ ಸಾವು

    ಕಾರ್ಕಳ ಮೇ 28 : ಇಲೆಕ್ಟ್ರಿಕ್ ಸ್ಕೂಟರ್‌ಗೆ ಪ್ರಾಣಿಯೊಂದು ಅಡ್ಡ ಬಂದ ಹಿನ್ನಲೆಯಲ್ಲಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ 26 ರಂದು ನಡೆದಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವನಪ್ಪಿದ್ದಾರೆ.


    ಮೃತರನ್ನು ಸದಾನಂದ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಇವರು ಮೇ 26 ತನ್ನ ಮಗನೊಂದಿಗೆ ಶಿರ್ಲಾಲಿನಲ್ಲಿರುವ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳಿದ್ದು, ವಾಪಾಸ್ಸು ಬರುವಾಗ ಹಿರ್ಗಾನ ಗ್ರಾಮದ ಬಿ ಎಮ್ ಶಾಲೆಯ ಬಳಿ ತಲುಪುವಾಗ ಯಾವುದೋ ಪ್ರಾಣಿಯೊಂದು ರಸ್ತೆಯಲ್ಲಿ ಅಡ್ಡ ಬಂದ ಕಾರಣ ಸ್ಕೂಟರ್ ಸವಾರಿ ಮಾಡುತ್ತಿದ್ದ ಸದಾನಂದ ಶೆಟ್ಟಿರವರು ಸ್ಕೂಟರ್‌ಗೆ ಒಮ್ಮೆಲೇ ಬ್ರೇಕ್ ಹಾಕಿದ್ದಾರೆ. ಈ ವಳೆ ಸ್ಕೂಟರ್‌ನೊಂದಿಗೆ ಸದಾನಂದ ಶೆಟ್ಟಿ ಮತ್ತು ಹಾಗೂ ಅವರ ಮಗ ಸ್ಪರ್ಷ್ ರಸ್ತೆಗೆ ಬಿದ್ದಿದ್ದಾರೆ,

    ಈ ವೇಳೆ ಸದಾನಂದ ಶೆಟ್ಟಿರವರಿಗೆ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಪಲಕಾರಿಯಾಗದೇ ಸದಾನಂದ ಶೆಟ್ಟಿ ಸಾವನಪ್ಪಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply