Connect with us

    LATEST NEWS

    ಕಾರ್ಕಳ – ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

    ಉಡುಪಿ ಸೆಪ್ಟೆಂಬರ್ 30: ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಪುಟಾಣಿ ಮಕ್ಕಳು ಸೇರಿದಂತೆ ನಾಲ್ವರು ಸಾವನಪ್ಪಿದ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.


    ಮೃತರನ್ನು ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಮರದ ಕೆಲಸ ಮಾಡಿಕೊಂಡಿದ್ದ ಸುರೇಶ್ ಆಚಾರ್ಯ ತನ್ನ ಬೈಕಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ವೇಣೂರಿನಿಂದ ನಲ್ಲೂರಿನಲ್ಲಿರುವ ತನ್ನ ಮೂಲ ಮನೆಗೆ ಹೊರಟಿದ್ದರು. ದಾರಿ ಮಧ್ಯೆ ಪಾಜೆಗುಡ್ಡೆ ತಿರುವಿನಲ್ಲಿ ಈಚರ್ ಲಾರಿಯ ಚಾಲಕ ಅತೀ ವೇಗ ಹಾಗೂ ಅಜಾರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುರೇಶ್ ಆಚಾರ್ಯ, ಮಕ್ಕಳಾದ ಸುಮೀಕ್ಷಾ, ಸುಶಾಂತ್ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply