Connect with us

    LATEST NEWS

    ಕುಕ್ಕುಂದೂರಿನಲ್ಲಿ ಮೂವರು ಮಹಿಳೆಯರ ಮೇಲೆ ವಿಕೃತಕಾಮಿಯಿಂದ ದಾಳಿ

    ಉಡುಪಿ ಅಕ್ಟೋಬರ್ 29: ವಿಕೃತಕಾಮಿಯೊಬ್ಬ ಮೂವರು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿರುವ ಪರಿಶಿಷ್ಟ ಕಾಲನಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಕೃತಕಾಮಿಯನ್ನು ಹುಸೇನ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


    ಹುಸೇನ್ ಪರಿಶಿಷ್ಠ ಕಾಲನಿಯಲ್ಲಿರುವ ಮಹಿಳೆಯರಿಗೆ ತೊಂದರೆ ನೀಡುತ್ತಿದ್ದ ಎಂದು ಹೇಳಲಾಗಿದ್ದು, ಈ ಹಿಂದೆ ಮನೆ ಮುಂದೆ ಬೆತ್ತಲಾಗಿ ತಿರುಗಿ ಮಹಿಳೆಯರನ್ನು ಪೀಡಿಸುತ್ತಿದ್ದು ಬಹಿರ್ದೆಸೆಗೆ ಹೋಗುತ್ತಿದ್ದ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಹುಸೇನ್ , ಇವರ ಹುಚ್ಚಾಟಕ್ಕೆ ಮಹಿಳೆಯರು ಕಾಲನಿಯಲ್ಲಿ ಭಯದಲ್ಲೇ ಬದುಕು ಸಾಗಿಸುತ್ತಿದ್ದರು. ಈ ನಡುವೆ ನಿನ್ನೆ ಮೂವರು ಮಹಿಳೆಯರು ಗೇರುಬೀಜ ಕಂಪೆನಿಯಿಂದ ಕೆಲಸ ಮುಗಿಸಿ ಮರಳುತ್ತಿದ್ದಾಗ ಏಕಾಏಕಿ ಮನೆಗೆ ನುಗ್ಗಿ ಮಹಿಳೆಯರಿಗೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಈ ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೆ ಕೈ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ.


    ಸದ್ಯ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತರ ಮನೆಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಭೇಟಿ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹುಸೇನನ್ನು ಊರಿನಿಂದ ಗಡಿಪಾರು ಮಾಡಿ ಎಂದು ಕಾಲನಿ ನಿವಾಸಿಗಳು ಪೊಲೀಸರಿಗೆ ಆಗ್ರಹಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply