Connect with us

    LATEST NEWS

    ಕಾರ್ಕಳ – ಗೋ ಕಳ್ಳತನ ಮುಸ್ಲಿಂ ಒಕ್ಕೂಟ ಖಂಡನೆ

    ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಕಳ್ಳತನ ವಿರುದ್ದ ಇದೀಗ ಮುಸ್ಲಿಂ ಸಮುದಾಯ ತಿರುಗಿ ಬಿದ್ದಿದ್ದು, ಗೋಕಳ್ಳರು ರಾಜಾರೋಷವಾಗಿ ಅಮಾನುಷ ಹಾಗೂ ಅಮಾನವೀಯವಾಗಿ ಗೋವುಗಳನ್ನು ಕದ್ದೊಯ್ಯುತ್ತಿರುವುದು ತೀರಾ ಖೇದಕರವಾದ ಸಂಗತಿ ಹಾಗೂ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ( ರಿ) ಕಾರ್ಕಳ ತಾಲೂಕು ಅಧ್ಯಕ್ಷ ಮೊಹಮ್ಮದ್ ಶರೀಫ್ ಬಂಗ್ಲೆಗುಡ್ಡೆ ಇವರು ತೀವ್ರವಾಗಿ ಖಂಡಿಸಿದ್ದಾರೆ.


    ಗೋ ಕಳ್ಳತನದಿಂದ ಗೋವುಗಳನ್ನು ನಂಬಿ ಅವುಗಳ ಆದಾಯದಿಂದಲೇ ಬದುಕು ಕಟ್ಟಿಕೊಂಡಿರುವ ಅದೆಷ್ಟೋ ಬಡಜನರು ಗೋವುಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದಾರೆ ಮಾತ್ರವಲ್ಲದೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಇಂತಹ ದುಷ್ಕ್ರತ್ಯಗಳಿಂದ ದಕ್ಕೆಯಾಗುತ್ತಿದೆ. ಇಂತಹ ಗೋ ಕಳ್ಳತನ ಮಾಡುತ್ತಿರುವ ಕಿಡಿಗೇಡಿಗಳು ಯಾರೇ ಆಗಿರಲಿ ಅಂತಹ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply