ಕಾರ್ಕಳ ನವೆಂಬರ್ 14: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಪಿಯುಸಿ ವಿಧ್ಯಾರ್ಥಿಯೊಬ್ಬ ಕಲ್ಲುಕೋರೆಯ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮೃತನನ್ನು ನಂದಳಿಕೆ ಗ್ರಾಮದ ನಿವಾಸಿ ಸುರೇಖಾ ಎಂಬುವವರು ಮಗ ಸುಮಂತ ದೇವಾಡಿಗ (16) ಎಂದು ಗುರುತಿಸಲಾಗಿದೆ.

ಸುಮಂತನು ನಿಟ್ಟೆ ಕಾಲೇಜಿನಲ್ಲಿ ಮೊದಲನೇ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು. ದಿನಾಂಕ 12/11/2025 ರಂದು ಸಂಜೆ 7:00 ಗಂಟೆಗೆ ಸುಮಂತನು ಮನೆಯಲ್ಲಿ ತನ್ನ ತಾಯಿಯೊಂದಿಗೆ ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ ಮಾಡಿ ಮನೆ ಬಿಟ್ಟು ಹೋಗಿದ್ದಾನೆ.
ಬಳಿಕ ಆತನನ್ನು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ದಿನಾಂಕ 13/11/2025 ರಂದು ಸುಮಂತನನ್ನು ಹುಡುಕಾಡುತ್ತಿದ್ದಾಗ ಮಧ್ಯಾಹ್ನ 15:30 ಗಂಟೆಗೆ ನಂದಳಿಕೆ ಗ್ರಾಮದ ಕೊಡ್ಸರಬೆಟ್ಟು ಎಂಬಲ್ಲಿ ಸೂರ್ಯಕಾಂತ ಶೆಟ್ಟಿ ಎಂಬುವವರ ಜಾಗದಲ್ಲಿರುವ ಕಲ್ಲಿನ ಕೋರೆಯ ನಿಂತ ನೀರಿನ ಬಳಿ ಆತನ ಚಪ್ಪಲಿ ಕಂಡುಬಂದಿದ್ದು ಅನುಮಾನಗೊಂಡು ನೀರಿನಲ್ಲಿ ಹುಡುಕಾಡಿದಾಗ ಆತನ ಮೃತದೇಹ ಪತ್ತೆಯಾಗಿರುತ್ತದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 56/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.