Connect with us

    LATEST NEWS

    ಬೆಳ್ಮಣ್ – ತಮ್ಮನ ಮನೆಯಲ್ಲಿ ಮೆಹಂದಿ ಸಡಗರ.. ಅಣ್ಣ ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ

    ಉಡುಪಿ ಜನವರಿ 26: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

     

    ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


    ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಸಹೋದರಿ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ. ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply