Connect with us

    DAKSHINA KANNADA

    ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಗೆ ‘ಶುಹದಾ’ ಎಕ್ಸಲೆನ್ಸ್ ಅವಾರ್ಡ್ 

    ಮಂಗಳೂರು :  ಧಾರ್ಮಿಕ-ಲೌಖಿಕ ಸಮನ್ವಯ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗಳೊಂದಿಗೆ ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ದಶಮಾನೋತ್ಸವದ ಅಂಗವಾಗಿ ಪ್ರದಾನಿಸಲಿರುವ “ಶುಹದಾ’’ ಎಕ್ಸಲೆನ್ಸ್ ಅವಾರ್ಡ್ ಗೆ ಕರ್ನಾಟಕದ ಜನಪ್ರಿಯ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಆಯ್ಕೆಯಾಗಿದ್ದಾರೆ.


    ಮುಸ್ಲಿಂ ಸಮುದಾಯದ ಸಬಲೀಕರಣಕ್ಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆ, ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಸರ್ವರಿಗೂ ಸರ್ವಸಮ್ಮತ ವ್ಯಕ್ತಿ, ಇತರ ಸಮುದಾಯದವರೂ ಗೌರವಿಸುವ ಹಾಗೂ ಒಪ್ಪಿಕೊಳ್ಳುವ ವ್ಯಕ್ತಿತ್ವ, ಮುಸ್ಲಿಂ ಸಮುದಾಯದೊಳಗೆ ಪ್ರಭಾವಬೀರಬಲ್ಲ ಹಾಗೂ ಇತರರಿಗೆ ಮಾದರೀಯೋಗ್ಯ, ಧಾರ್ಮಿಕ ಪ್ರಜ್ಞೆ – ಸೌಹಾರ್ದ ಮನೋಭಾವ, ರಾಷ್ಟ್ರೀಯ ಪ್ರಜ್ಞೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
    ದಿನಾಂಕ 2024 ಆಗಸ್ಟ್ 19 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮಾಡನ್ನೂರಿನಲ್ಲಿ ನಡೆಯುವ ನೂರುಲ್ ಹುದಾ ಸಂಸ್ಥೆಯ ದಶಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಧಾರ್ಮಿಕ ವಿದ್ವಾಂಸರ ಹಾಗೂ ಸಚಿವರುಗಳ ಸಮ್ಮುಖದಲ್ಲಿ ಸನ್ಮಾನ್ಯ ಯು.ಟಿ. ಖಾದರ್ ಅವರಿಗೆ “ಶುಹದಾ” ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
    ಪ್ರಸ್ತುತ ಕಾರ್ಯಕ್ರಮದಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಗ್ರಗಣ್ಯ ಉಲಮಾಗಳಾದ ಸೈಯ್ಯದ್ ಸಾದಿಖಲಿ ಶಿಹಾಬ್ ತಂಙಳ್, ಶೈಖುನಾ ಆಲಿಕುಟ್ಟಿ ಉಸ್ತಾದ್, ಯು.ಎಂ. ಅಬ್ದುಲ್ ರಹ್ಮಾನ್ ಮುಸ್ಲಿಯಾರ್, ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್, ಕೆ.ಎಸ್. ಅಲಿ ತಂಙಳ್ ಕುಂಬೋಳ್ ಸಹಿತ ಕರ್ನಾಟಕ ಸರಕಾರದ ಘನವೆತ್ತ ಸಚಿವರುಗಳಾದ ಬಿ.ಝಡ್. ಝಮೀರ್ ಅಹ್ಮದ್ ಖಾನ್, ರಹೀಂ ಖಾನ್, ದಿನೇಶ್ ಗುಂಡೂರಾವ್, ಅಶೋಕ್ ಕುಮಾರ್ ರೈ ಸೇರಿದಂತೆ ಸಂಸದರು, ಶಾಸಕರು ಹಾಗೂ ಹಲವಾರು ಉಲಮಾ, ಉಮರಾ, ಸಾದಾತು ನೇತಾರರು ಪಾಲ್ಗೊಳ್ಳಲಿದ್ದಾರೆ.

    ಶುಹದಾ ಎಕ್ಸಲೆನ್ಸ್ ಅವಾರ್ಡ್
    ಶುಹದಾ (ಹುತಾತ್ಮರು) ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಮಾಡನ್ನೂರು ಜಮಾಅತ್ ಇದರ ಮುಂದಾಳುತ್ವದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಪ್ರಾರಂಭಗೊಂಡ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯು ದಶಮಾನೋತ್ಸವ ಆಚರಣೆಗೆ‌ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಹಾಗೂ ಸಮಾಜಕ್ಕೆ ಅನನ್ಯ ಕೊಡುಗೆ ನೀಡುತ್ತಿರುವ ಓರ್ವ ವ್ಯಕ್ತಿಯನ್ನು ಆಯ್ಕೆ ಮಾಡಿ “ಶುಹದಾ” ಎಕ್ಸಲೆನ್ಸ್ ಎಂಬ ಹೆಸರಿನಲ್ಲಿ ಪ್ರತಿಷ್ಠಿತ ಪ್ರಶಸ್ತಿಯೊಂದನ್ನು ಪ್ರದಾನ ಮಾಡಲು ನಿರ್ಧರಿಸಿದೆ.
    ಪ್ರಮುಖ ಮಾನದಂಡಗಳ ಆಧಾರದಲ್ಲಿ ಈ ಪ್ರಶಸ್ತಿಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ. ಅದಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರಮುಖರನ್ನೊಳಗೊಂಡ ತಂಡವೊಂದನ್ನು ರಚಿಸಲಾಗಿದೆ. ಪ್ರಸ್ತುತ ತಂಡವು ಸಮಾಜ ಸೇವೆ, ಮುಸ್ಲಿಂ ಸಮುದಾಯದೊಳಗಿನ ಪ್ರಭಾವ, ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅರ್ಹ ವ್ಯಕ್ತಿಗಳನ್ನು ಸೂಚಿಸುತ್ತಾರೆ.
    – ಮುಸ್ಲಿಂ ಸಮುದಾಯದ ಸಬಲೀಕರಣಕ್ಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆ.
    – ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಸರ್ವರಿಗೂ ಸರ್ವಸಮ್ಮತ ವ್ಯಕ್ತಿ.
    – ಇತರ ಸಮುದಾಯದವರೂ ಗೌರವಿಸುವ ಹಾಗೂ ಒಪ್ಪಿಕೊಳ್ಳುವ ವ್ಯಕ್ತಿ.
    – ಮುಸ್ಲಿಂ ಸಮುದಾಯದೊಳಗೆ ಪ್ರಭಾವಬೀರಬಲ್ಲ ಹಾಗೂ ಇತರರಿಗೆ ಮಾದರೀಯೋಗ್ಯ.
    – ಧಾರ್ಮಿಕ ಪ್ರಜ್ಞೆ – ಸೌಹಾರ್ದ ಮನೋಭಾವ, ರಾಷ್ಟ್ರೀಯ ಪ್ರಜ್ಞೆಯುಳ್ಳವರಾಗಿರಬೇಕು.
    ಮೇಲ್ಕಂಡ ಮಾನದಂಡಗಳು ಸೇರಿದಂತೆ ವಿವಿಧ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚೊಚ್ಚಲ ಹಾಗೂ 2024ನೇ ಸಾಲಿನ ಶುಹದಾ ಎಕ್ಸಲೆನ್ಸ್ ಅವಾರ್ಡ್ ಗೆ ಕರ್ನಾಟಕದ ಘನವೆತ್ತ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಅವರ ಪ್ರತಿಭೆ, ವರ್ಚಸ್ಸು, ಸಾಧನೆ, ಪರಿಶ್ರಮಗಳನ್ನು ನೂರುಲ್ ಹುದಾ ಸಂಸ್ಥೆಯು ಗೌರವಿಸುತ್ತದೆ.

    ಥಿಯೇಟರ್ ಶೌಚಗೃಹಕ್ಕೆ ತೆರಳಿದ್ದ ಯುವತಿಯ ವಿಡಿಯೋ ಸೆರೆ ಹಿಡಿದ ಇಬ್ಬರು ಬಾಲಕರ ಬಂಧನ..!

    Share Information
    Advertisement
    Click to comment

    You must be logged in to post a comment Login

    Leave a Reply