DAKSHINA KANNADA
ಅಡ್ಯನಡ್ಕ – ಕರ್ಣಾಟಕ ಬ್ಯಾಂಕ್ ನಲ್ಲಿ ದರೋಡೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಪುತ್ತೂರು ಫೆಬ್ರವರಿ 08: ಕರ್ಣಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಚಿನ್ನ ಮತ್ತು ನಗದು ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ.
ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಬ್ರ್ಯಾಂಚ್ ನಲ್ಲಿ ಈ ಘಟನೆ ನಡೆದಿದೆ. ಕಳ್ಳರು ಬ್ಯಾಂಕ್ ಕಟ್ಟಡದ ಹಿಂಬದಿಯ ಕಿಟಕಿ ಒಡೆದು ಬ್ಯಾಂಕಿನೊಳಗೆ ನುಗ್ಗಿ ಚಿನ್ನ ಮತ್ತು ನಗದು ದೋಚಿದ್ದಾರೆ. ಎಂದಿನಂತೆ ಬೆಳಿಗ್ಗೆ ಬ್ಯಾಂಕ್ ತೆರೆದಾಗ ಈ ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೋಲೀಸ್ ಅಧಿಕಾರಿಗಳು, ಶ್ವಾನದಳ,ಬೆರಳಚ್ಚು ತಂಡದ ಭೇಟಿ ಪರಿಶೀಲನೆ ನಡೆಸಿದ್ದಾರೆ. ಎಷ್ಟು ಮೌಲ್ಯದ ವಸ್ತು ಕಳವಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login