LATEST NEWS
ಕರ್ಣಾಟಕ ಬ್ಯಾಂಕ್ ನ ಮೊದಲ ಕನ್ನಡಿಗೇತರ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ ಅಂಗೀಕಾರ

ಮಂಗಳೂರು ಜೂನ್ 30 : ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಟಾಪ್ ಮೋಸ್ಟ್ ಪೋಸ್ಟ್ ನ ಇಬ್ಬರು ಅಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕರ್ಣಾಟಕನ ಬ್ಯಾಂಕ್ ನ ನಿರ್ದೇಶಕ ಸಿಇಓ ಆಗಿರುವ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ ನೀಡಿದ್ದು, ಇದನ್ನು ಬ್ಯಾಂಕ್ ನ ನಿರ್ದೇಶಕ ಮಂಡಳಿ ಅಂಗಿಕರೀಸಿದೆ ಎಂದು ವರದಿಯಾಗಿದೆ.
ಖಾಸಗಿ ರಂಗದ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾದ ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್ ರಾವ್ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್ನ ನಿರ್ದೇಶಕ ಮಂಡಳಿ ಭಾನುವಾರ ಅಂಗೀಕರಿಸಿದೆ.

ಈ ರಾಜಿನಾಮೆ 2025ರ ಜುಲೈ 15ರಿಂದ ಅನ್ವಯವಾಗಲಿದೆ. ಶ್ರೀಕೃಷ್ಣನ್ ಹರಿಹರ ಶರ್ಮಾ ಅವರು ಮುಂಬೈಗೆ ಮರಳುವುದೂ ಸೇರಿ ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಬ್ಯಾಂಕ್ನ ಇಡಿ ಶೇಖರ್ರಾವ್ ಅವರು ಕೂಡಾ ಮಂಗಳೂರಿಗೆ ಸ್ಥಳಾಂತರಗೊಳ್ಳಲು ಅಸಾಧ್ಯ ಎಂಬ ಕಾರಣ ನೀಡಿ ಮತ್ತು ಇತರ ವೈಯುಕ್ತಿಕ ಕಾರಣಗಳಿಗೆ ರಾಜೀನಾಮೆ ನೀಡಿದ್ದಾರೆ. ಇದು ಜುಲೈ 31ರಿಂದ ಅನ್ವಯವಾಗಲಿದೆ ಎಂದು ಬ್ಯಾಂಕ್ ಪ್ರಕಟನೆ ತಿಳಿಸಿದೆ.
ಆದರೆ ಬ್ಯಾಂಕ್ ನ ಇಬ್ಬರು ಪ್ರಮುಖ ಅಧಿಕಾರಿಗಳು ಏಕಾಏಕಿ ರಾಜೀನಾಮೆ ನೀಡಲು ಮಾತ್ರ ಬಲವಾದ ಕಾರಣವಿದೆ ಎಂದು ಹೇಳಲಾಗುತ್ತಿದೆ. ಮೊದಲು ಆಡಳಿತ ಮಂಡಳಿಯಲ್ಲಿ ಚರ್ಚಿಸದೇ ಇತರ ಉದ್ದೇಶಗಳಿಗಾಗಿ 1.53 ಕೋಟಿ ಹಣ ಬಳಸಿಕೊಂಡಿದ್ದಕ್ಕೆ ವಿವಾದ ಉಂಟಾಗಿತ್ತು ಎಂದು ಹೇಳಲಾಗುತ್ತಿದೆ. 1.53 ಕೋಟಿ ಹಣ ವನ್ನು ಬಳಸಿಕೊಳ್ಳಲು ಆಡಳಿತ ಮಂಡಳಿಯ ಅನುಮೋದನೆ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಆಡಳಿತ ನಡುವೆ ವ್ಯತ್ಯಾಸಗಳು ಹುಟ್ಟಿಕೊಂಡಿದ್ದವು. ‘ಈ ಮೊತ್ತವನ್ನು ಸಂಬಂಧಪಟ್ಟ ನಿರ್ದೇಶಕರಿಂದ ವಸೂಲಿ ಮಾಡಬಹುದು’ ಎಂದು ಲೆಕ್ಕಪರಿಶೋಧಕರು ಹೇಳಿದ್ದರು. ಆ ವೆಚ್ಚದ ಸಂಬಂಧ ಹುಟ್ಟಿಕೊಂಡಿದ್ದ ವಿವಾದ ಇದೀಗ ಇಬ್ಬರ ಹುದ್ದೆಯನ್ನು ಬಲಿ ಪಡೆಯುವ ಹಂತಕ್ಕೆ ತಲುಪಿದೆ.
ಆದರೆ ಕೇವಲ 1.53 ಕೋಟಿ ಹಣ ಕರ್ಣಾಟಕ ಬ್ಯಾಂಕ್ ಗೆ ದೊಡ್ಡ ವಿಷಯ ಅಲ್ಲ ಎಂದು ಹೇಳಲಾಗುತ್ತಿದೆ. 2023ರ ಜೂನ್ನಲ್ಲಿ ಶ್ರೀಕೃಷ್ಣನ್ ಕರ್ಣಾ ಟಕ ಬ್ಯಾಂಕ್ ಎಂಡಿ ಹಾಗೂ ಸಿಇಒ ಆಗಿ ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದರು. ಚೆನ್ನೈ ಮೂಲದ ಶ್ರೀಕೃಷ್ಣನ್ ಬ್ಯಾಂಕಿನ ಇತಿಹಾಸಲ್ಲಿ ಆ ಹುದ್ದೆಗೇರಿದ್ದ ಮೊದಲ ಕನ್ನಡಿಗೇತರ ಆಗಿದ್ದರು. ಬ್ಯಾಂಕ್ನ ಹಿತಾಸಕ್ತಿಗೆ ವಿರುದ್ಧವಾಗಿ ವರ್ತನೆ ಕಂಡುಬಂದ ಹಿನ್ನೆಲೆಯಲ್ಲಿ ಜೂನ್ 14ರಂದು ನಡೆದ ಬ್ಯಾಂಕ್ನ ನಿರ್ದೇಶಕ ಮಂಡಳಿಯ ಸಭೆಯಲ್ಲಿ ಎಂಡಿ ಶ್ರೀಕೃಷ್ಣನ್ ರಾಜಿನಾಮೆಗೆ ನೀಡಲಾಗಿತ್ತು. ಸೂಚನೆ ಶ್ರೀಕೃಷ್ಣನ್ ಅವರು ಶುಕ್ರವಾರ ಎಂಡಿ ಹಾಗೂ ಸಿಇಒ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇವರಲ್ಲದೆ ಇಡಿ ಶೇಖರ್ ರಾವ್ ಅವರಿಂದಲೂ ನಿರ್ದೇಶಕ ಮಂಡಳಿ ರಾಜಿನಾಮೆ ಕೇಳಿತ್ತು ಎಂದು ಮೂಲಗಳು ತಿಳಿಸಿವೆ.
ಬ್ಯಾಂಕಿನ ಎಂಡಿ, ಸಿಇಒ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಶ್ರೀಕೃಷ್ಣನ್ ಅವರು ಕನ್ನಡ ವಿರೋಧಿ ಧೋರಣೆ ತಳೆದಿದ್ದರು. ಕನ್ನಡಿಗರಿಂದಲೇ ಸ್ಥಾಪನೆಗೊಂಡ, ಕರ್ನಾಟಕ ಕರಾವಳಿಯಹೆಮ್ಮೆಯಕರ್ಣಾಟಕ ಬ್ಯಾಂಕ್ ಅದರದ್ದೇ ಆದ ಅಸ್ಥಿತೆ ಹೊಂದಿದೆ. ಕಲೆ, ಸಂಸ್ಕೃತಿಗೆ ತನ್ನದೇ ಕೊಡುಗೆ ನೀಡುತ್ತಿರುವ ಕರ್ಣಾಟಕ ಬ್ಯಾಂಕ್ನ ಧೈಯ ಉದ್ದೇಶಗಳಿಗೆ ತದ್ವಿರುದ್ಧವಾದ ಧೋರಣೆಯನ್ನು ಶ್ರೀಕೃಷ್ಣನ್ ಹೊಂದಿದ್ದರು ಎಂಬ ಆರೋಪ ಇದೆ.