Connect with us

    KARNATAKA

    ರಾಜ್ಯದಲ್ಲಿ ನಡೆಯುವ ಬೈ ಎಲೆಕ್ಷನ್ನಲ್ಲಿ ಬಿಜೆಪಿಗೆ ಎದುರಾಳಿಯೇ ಇಲ್ಲ

    ರಾಜ್ಯದಲ್ಲಿ ನಡೆಯುವ ಬೈ ಎಲೆಕ್ಷನ್ನಲ್ಲಿ ಬಿಜೆಪಿಗೆ ಎದುರಾಳಿಯೇ ಇಲ್ಲ

    ಮಂಗಳೂರು ಅಕ್ಟೋಬರ್ 25: ಮಹಾರಾಷ್ಟ್ರ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಸೋಲುಂಟಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಫಲಿತಾಂಶ ರಾಜ್ಯದಲ್ಲಿ ಎಫೆಕ್ಟ್ ಆಗಲ್ಲ ರಾಜ್ಯದ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದ್ದು ರಾಜ್ಯದಲ್ಲಿ ನಡೆಯುವ ಬೈ ಎಲೆಕ್ಷನ್ನಲ್ಲಿ ಬಿಜೆಪಿಗೆ ಎದುರಾಳಿಯೇ ಇರಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಬಳಿ ದುಡ್ಡಿಲ್ಲ ಎಂಬ ಸಚಿವ ಸಿಸಿ ಪಾಟೀಲ್ ಹೇಳಿಕೆಗೆ ಡಿಸಿಎಂ ಸಮರ್ಥಿಸಿಕೊಂಡಿದ್ದಾರೆ. 40 ಸಾವಿರ ಕೋಟಿ ಸಾಲ ಮನ್ನಾಕ್ಕಾಗಿ ಹಣ ತೊಡಗಿಸಬೇಕಿದೆ. ಹಿಂದಿನ ಮೈತ್ರಿ ಸರಕಾರ ಕೇವಲ 15 ಸಾವಿರ ಕೋಟಿಯಷ್ಟೇ ಕೊಟ್ಟಿದೆ. ಅಲ್ಲದೆ ಈ ಬಾರಿ ನೆರೆಯೂ ಬಂದಿರುವುದರಿಂದ ಮತ್ತೆ ಹಣ ಹೊಂದಿಸಬೇಕಾಗಿದೆ. ಹೀಗಾಗಿ ಹೊಸ ಯೋಜನೆ ಕೈಗೊಳ್ಳಲು ಈ ಬಜೆಟಿನಲ್ಲಿ ಹಣ ಸಾಕಾಗಲ್ಲ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply