LATEST NEWS
ಹಿಜಾಬ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್
ಬೆಂಗಳೂರು ಮಾರ್ಚ್ 16: ಹಿಜಬ್ ವಿಚಾರಕ್ಕೆ ಹೈ ಕೋರ್ಟ್ ನೀಡಿರುವ ತೀರ್ಪಿಗೆ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ಗೆ ಘೋಷಣೆ ಮಾಡಿದ್ದಾರೆ.
ನಾಳೆ ( ಮಾರ್ಚ್ 17) ಇಡೀ ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ. ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.
You must be logged in to post a comment Login