Connect with us

    BELTHANGADI

    ಕರಾವಳಿಯಲ್ಲಿ ಹೆಣ ಇಟ್ಕೊಂಡು ರಾಜಕೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

    ಕರಾವಳಿಯಲ್ಲಿ ಹೆಣ ಇಟ್ಕೊಂಡು ರಾಜಕೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಳ್ತಂಗಡಿ ಜನವರಿ 7: ಕರಾವಳಿಯಲ್ಲಿ ಹೆಣ ಇಟ್ಕೊಂಡು ರಾಜಕೀಯ ಮಾಡ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿವಿಧ ಕಾರ್ಯಕ್ರಮ ಗಳಿಗೆ ಚಾಲನೆ ಹಿನ್ನಲೆ ನೀಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ತಂಗಡಿ ಗೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಶೀರ್ ಹತ್ಯೆ ಖಂಡನೀಯ ಎಂದು ಹೇಳಿದರು. ಹತ್ಯೆ ಮಾಡೋದು ಮನುಷ್ಯತ್ವ ವಿರೋಧಿ ಹೇಳಿದ ಸಿಎಂ ಬಶೀರ್ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

    ಬಶೀರ್ ಕುಟುಂಬಕ್ಕೆ ಸರ್ಕಾರದಿಂದ ವತಿಯಿಂದ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಸಿಎಂ ಹೋದಲೆಲ್ಲಾ ಹೆಣ ಉರುಳುವ ಬಿಜೆಪಿ ಟೀಕೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಇವತ್ತು ಬಶೀರ್ ತೀರಿ ಹೋಗಿದ್ದಾರೆ ಇದಕ್ಕೆ ಏನು ಹೇಳ್ತೀರಿ ಎಂದು ಪ್ರಶ್ನೆ ಮಾಡಿದರು. ಬಿಜೆಪಿಯವರಿಗೆ ಟೀಕೆ ಮಾಡೋದೇ ಕೆಲಸ ಎಂದು ಆರೋಪಿಸಿದರು.

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 76 ಕೋಟಿಯ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಮೃತ ದೀಪಕ್ ರಾವ್, ಬಶೀರ್ ಸಾವಿಗೆ ಸಂತಾಪ ಸೂಚಿಸಿಲಾಯಿತು. ಒಂದು ನಿಮಿಷ ಮೌನಾಚಾರಣೆಯ ಮೂಲಕ ಶೃದ್ದಾಂಜಲಿ ಸಲ್ಲಿಸಲಾಯಿತು.

     

    Share Information
    Advertisement
    Click to comment

    You must be logged in to post a comment Login

    Leave a Reply