Connect with us

    DAKSHINA KANNADA

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಬಾಂಬೋ, ಪಟಾಕಿಯೋ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಬಾಂಬೋ, ಪಟಾಕಿಯೋ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯ

    ಮಂಗಳೂರು, ಜನವರಿ 21: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ನಿಷ್ಕ್ರೀಯಗೊಳಿಸಿರೋದು ಗಣೇಶ ಉತ್ಸವದಲ್ಲಿ ಅಟಾಮ್ ಬಾಂಬ್ ಸಿಡಿಸಿದಂತಿತ್ತು.

    ಈ ರೀತಿಯ ಬಾಂಬ್ ಪ್ರಹಸನದ ಸತ್ಯಾಸತ್ಯತೆಯನ್ನು ಜನತೆಯ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ನಿನ್ನೆ ದಿನ ಅಧಿಕಾರಿಗಳು ಮಾಡಿದಂತಹ ಬಾಂಬ್ ನಿಷ್ಕ್ರೀಯಗೊಳಿಸಿರುವ ವ್ಯವಸ್ಥೆ ಇದೇ ಮೊದಲ ಬಾರಿಯಾಗಿದ್ದು, ಇದೊಂದು ಅಣಕು ಪ್ರದರ್ಶನದಂತೆ ಕಂಡಿದೆ.

    ಮಂಗಳೂರಿನಲ್ಲಿ ಒಂದು ರೀತಿಯ ಆತಂಕ ಮೂಡಿಸುವ ಕಾರ್ಯದಲ್ಲಿ ಸರಕಾರ ತೊಡಗಿದ್ದು, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಶಾಂತಿ ಮೂಡುತ್ತಿದೆ ಎಂದು ದೂರಿದರು.

    ಯಾರನ್ನೋ ಮೆಚ್ಚಿಸೋಕೆ ಈ ರೀತಿಯ ಘಟನೆಗಳನ್ನು ನಡೆಸಬೇಡಿ ಎಂದು ಸರಕಾರದ ವಿರುದ್ಧ ಆರೋಪ ಮಾಡಿದ ಅವರು ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕು ಎಂದರು.

    ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷ ತನ್ನನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು, ಅವರು ಹೇಳಿದ ಮಾಹಿತಿಯನ್ನು ನಾನು ಒಪ್ಪಲು ಸಾಧ್ಯವಿಲ್ಲ.

    ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಕಮಿಷನರ್ ಹೇಳಿದ್ದಾರೆ.

    ನಿನ್ನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಬಾಂಬೋ ಅಥವಾ ಪಟಾಕಿಯೋ ಎನ್ನುವ ಸಂಶಯ ಕಾಡುತ್ತಿದೆ ಎಂದು ಅವರು ಘಟನೆಯ ಬಗ್ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply