KARNATAKA
ಭಾರಿ ವಿರೋಧದ ಬಳಿಕ ವಿಕೇಂಡ್ ಕರ್ಪ್ಯೂ ವಾಪಾಸ್ ಪಡೆದ ರಾಜ್ಯ ಸರಕಾರ
ಬೆಂಗಳೂರು ಜನವರಿ 21: ರಾಜ್ಯಾದ್ಯಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ ರಾಜ್ಯದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ. ಸದ್ಯ ಸಭೆ ನಡೆಯುತ್ತಿದ್ದು, ವಿಕೇಂಡ್ ಕರ್ಪ್ಯೂ ತೆಗೆದರೂ ರಾತ್ರಿ ಕರ್ಪ್ಯೂ ಅಲ್ಲದೆ ಮತ್ತಷ್ಟು ಕಠಿಣ ಕ್ರಮಗಳು ಜಾರಿಗೆ ಬರುವ ಸಾಧ್ಯತೆ ಇದೆ.
You must be logged in to post a comment Login