Connect with us

DAKSHINA KANNADA

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಸುಬ್ರಹ್ಮಣ್ಯ, ಜೂನ್ 30: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

ರಾಜ್ಯಪಾಲರ ಭೇಟಿ ಹಿನ್ನಲೆಯಲ್ಲಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ನಿಷೇಧಿಸಲಾಗಿತ್ತು. ಮಧ್ಯಾಹ್ನ ಕುಟುಂಬ ಸಮೇತ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು,ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *