KARNATAKA
ಜೂನ್ 14ರ ವರೆಗೆ ಲಾಕ್ ಡೌನ್ ಮುಂದುವರಿಕೆ – ಸಿಎಂ ಬಿಎಸ್ ವೈ
ಬೆಂಗಳೂರು ಜೂನ್ 03: ರಾಜ್ಯದಲ್ಲಿ ಮತ್ತೆ ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ಪ್ರಕರಣಗಳ ಇಳಿಕೆಗೆ ಕಠಿಣ ಕ್ರಮ ಕೈಗೊಳ್ಳುವ ಹಿನ್ನಲೆ ಮತ್ತೆ ಲಾಕ್ ಡೌನ್ ನ್ನು ಜೂ್ 14 ರವರೆಗೆ ಮುಂದುವರೆಸಲಾಗಿದ್ದು, ಈಗ ಇರುವ ಎಲ್ಲಾ ಕಟ್ಟುನಿಟ್ಟಿನ ಮಾರ್ಗಸೂಚಿಗಳು ಮುಂದುವರೆಯಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 5ರಷ್ಟು ಕಡಿಮೆಯಾದರೆ ಲಾಕ್ಡೌನ್ ತೆರವುಗೊಳಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜೂನ್ 14ರವರೆಗೆ ಲಾಕ್ಡೌನ್ ನಿಯಮಗಳಲ್ಲಿ ಬದಲಾವಣೆ ಇಲ್ಲ. ಹೋಟೆಲ್ಗಳು ಸಂಜೆಯವರೆಗೂ ತೆರೆಯಬಹುದು. ಆದರೆ ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.
You must be logged in to post a comment Login