Connect with us

KARNATAKA

ಡಿಸೇಲ್ ಬೆಲೆ ಏರಿಕೆ- ಲಾರಿ ಮುಷ್ಕರದ ಎಚ್ಚರಿಕೆ ನೀಡಿದ ಷಣ್ಮುಗಪ್ಪ

ಬೆಂಗಳೂರು ಅಕ್ಟೋಬರ್ 18:ಡಿಸೇಲ್ ಮೇಲಿನ ಸುಂಕವನ್ನು ಕಡಿಮೆಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರು ಮುಂದಾಗಿದ್ದು, ಸರಕಾರಕ್ಕೆ ಮುಷ್ಕರದ ಎಚ್ಚರಿಕೆಯನ್ನು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ನೀಡಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಡೀಸೆಲ್ ಬೆಲೆ 26 ರೂಪಾಯಿಯಷ್ಟು ಹೆಚ್ಚಾಗಿದೆ.‌ ರಾಜ್ಯದಲ್ಲಿರುವ ಆರು ಲಕ್ಷ ಲಾರಿಗಳಲ್ಲಿ ಶೇ. 30 ರಷ್ಟು ಲಾರಿಗಳು ಶೆಡ್ ಸೇರಿವೆ. ದಿನದಿಂದ‌ ದಿನಕ್ಕೆ ಡೀಸೆಲ್‌ ಬೆಲೆ ಗಗನಕ್ಕೆ ಏರುತ್ತಾ ಶತಕ ಬಾರಿಸಿದೆ.‌‌ ಅದರೂ‌ ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.‌ ಡೀಸೆಲ್‌‌ ಬೆಲೆ ಏರಿಕೆಯಾಗುತ್ತಿರುವುದರಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ‌ ಏರಿಕೆಯಾಗಿದ್ದು ಜನ ಸಾಮಾನ್ಯರಿಗೆ ದೊಡ್ಡ ಹೊರೆಯಾಗತ್ತಿದೆ ಎಂದರು.

ವ್ಯಾಟ್‌ ಇಳಿಕೆಯಾಗದೇ ಇದ್ದರೆ ಅಕ್ಟೋಬರ್ 23 ರಂದು ಲಾರಿ‌ ಮಾಲೀಕರು ಸಭೆ ಮಾಡಿ‌ ಅನಿವಾರ್ಯವಾಗಿ ಲಾರಿ ಮುಷ್ಕರ ಮಾಡಬೇಕಾಗುತ್ತೆ.‌ ಅಷ್ಟರ ಒಳಗಡೆ ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ವ್ಯಾಟ್ ಕಡಿಮೆ‌ ಮಾಡಬೇಕು. ಇಲ್ಲವಾದಲ್ಲಿ 6 ಲಕ್ಷ ಲಾರಿಗಳು ರಸ್ತೆಗಿಳಿಯದೇ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *