Connect with us

    KARNATAKA

    ಕಾರವಾರ : ಬಸ್​​ ಓವರ್ ಟೇಕ್​ ಮಾಡಲು ಹೋಗಿ ಬೈಕ್ ಸವಾರ ಮೃತ್ಯು..!

    ಓವರ್‌ಟೇಕ್ ಮಾಡಲು ಹೋಗಿ ಬಸ್  ಅಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ನಡೆದಿದೆ.

    ಕಾರವಾರ : ಓವರ್‌ಟೇಕ್ ಮಾಡಲು ಹೋಗಿ ಬಸ್  ಅಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ನಡೆದಿದೆ.

    ಜೀತೇಂದ್ರ ಗೌಡ ಮೃತ ದುರ್ದೈವಿಯಾಗಿದ್ದು ಅಂಕೋಲಾ ತಾಲೂಕಿನ ಶಿರಗುಂಜಿ ಗ್ರಾಮದ ನಿವಾಸಿಯಾಗಿದ್ದಾರೆ.

    ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ರಸ್ತೆ ತಿರುವಿನಲ್ಲಿ ಬಸ್ ಓವರ್‌ಟೇಕ್ ಮಾಡುವ ವೇಳೆ ಕಂಟೇನರ್ ಎದುರಾಗಿದೆ.

    ಈ ವೇಳೆ ಕಂಟೇನರ್​​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸವಾರ ಬಸ್ ಕೆಳಗೆ ಉರುಳಿ ಬಿದ್ದಿದ್ದಾನೆ.

    ಈ ವೇಳೆ ಯುವಕನ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ.

    ಸ್ಥಳಕ್ಕೆ ಕಾರವಾರ ಸಂಚಾರಿ  ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply