Connect with us

LATEST NEWS

kasaragod : ಅನಂತಪುರ ದೇವಳ ಭಕ್ತರ ಮಹದಾಸೆ ಪೂರೈಸಿದ ‘ಬಬಿಯಾ’..!

ಕಾಸರಗೋಡು: ಪುರಾಣ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿ ವರ್ಷವೇ ಸಂದಿದೆ.

ಬಬಿಯಾಳ ಶೂನ್ಯ ಜಾಗ ದೇವಳಕ್ಕೆ ಬರುವ ಭಕ್ತರಿಗೆ ನಿರಾಸೆ ಉಂಟು ಮಾಡುತ್ತಿತ್ತು. ಆದ್ರೆ ಇದೀಗ ಭಕ್ತಾದಿಗಳ ಆಸೆಯಂತೆ ಅನಂತಪುರ ಕ್ಷೇತ್ರದಲ್ಲಿ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದೆ. ವಾರದ ಹಿಂದೆ ದೇವಳಕ್ಕೆ ಬಂದ ಭಕ್ತರೊಬ್ಬರು ಮೊಸಳೆ ಕಂಡಂತೆ ಆಯಿತು ಅಂದ್ರೂ ಆಡಳಿತ ಮಂಡಳಿಗೆ ಸಾಕ್ಷ್ಯಾಧಾರ ಇಲ್ಲದಿದ್ದರಿಂದ ನಂಬಲು ಅಸಾಧ್ಯವಾಗಿತ್ತು.

ಇದೀಗ ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ. ದೇವರ ಪ್ರತಿ ಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸುತ್ತಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ದೇವರ ಪವಾಡವೋ, ಕಾರಣಿಕ ಶಕ್ತಿಯೋ ಎಂಬಂತೆ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಭಕ್ತರನ್ನು ಪುಳಕಿತಗೊಳಿಸಿದೆ.

Share Information
Advertisement
Click to comment

You must be logged in to post a comment Login

Leave a Reply