Connect with us

    LATEST NEWS

    ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿಯ ದಾರುಣ ಅಂತ್ಯ..!

    ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಾಸರಗೋಡಿನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.

    ಕಾಸರಗೋಡು : ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಕಾಸರಗೋಡಿನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.

    ಸಿರಿ ಬಾಗಿಲಿನ ಮುಹಮ್ಮದ್ ಸುಬೈರ್ ಎಂಬವರ ಪುತ್ರಿ ಆಯಿಷಾ ಸೆಯಾ (4) ಮೃತ ವಿದ್ಯಾರ್ಥಿನಿ.

    ಮನೆ ಸಮೀಪ ಈ ದುರಂತ ನಡೆದಿದೆ. ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ.

    ಸ್ಥಳೀಯರು ಧಾವಿಸಿ ಬಂದು ಕೂಡಲೇ ವಿದ್ಯಾರ್ಥಿನಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

    ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply