Connect with us

    KARNATAKA

    ಕಾಸರಗೋಡು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಹೃದಯಾಘಾತಕ್ಕೆ ಬಲಿ..!

    ಕಾಸರಗೋಡು : ಕಾಸರಗೋಡು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ (48) ಇಂದು  ಮುಂಜಾನೆ ಹೃದಯಾಘಾತಕ್ಕೆ  ಬಲಿಯಾಗಿದ್ದಾರೆ.

    ಜಿಲ್ಲೆಯ ಮಾವುಂಗಾಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ. ಮುಂಜಾನೆ ಮನೆಯಲ್ಲಿ ಕುಸಿದುಬಿದ್ದ ವಿನೋದ್ ರವನ್ನು  ಕೂಡಲೇ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ ಎನ್ನಲಾಗಿದೆ.  ಪುಲ್ಲೂರು ನಿವಾಸಿಯಾಗಿದ್ದ ವಿನೋದ್ ರವರು ಕೆ ಎಸ್ ಯು ಮೂಲಕ ಸಕ್ರಿಯ ರಾಜಕೀಯಕ್ಕೆ ಧುಮುಕಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಇವರು, ಬಳಿಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿನೋಧ್ ಅವರ ನಿಧನಕ್ಕೆ ಕಾಂಗ್ರೆಸ್ ಸೇರಿದಂತೆ, ರಾಜಕೀಯ ನೇತಾರರು, ಸಮಾಜದ ಗಣ್ಯರು ಕಂಬನಿ ಮಿಡಿದಿದ್ದಾರೆ.


    Share Information
    Advertisement
    Click to comment

    You must be logged in to post a comment Login

    Leave a Reply